ನಿಲ್ಲಿಸಿದ್ದ ಕಾರಿನ ಗಾಜು ಒಡೆದು 15 ಲಕ್ಷ ಎಗರಿಸಿದ ಕಳ್ಳರು ➤ ಸಿಸಿ ಕ್ಯಾಮರಾದಲ್ಲಿ ಕಳ್ಳತನದ ದೃಶ್ಯ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.13. ಬ್ಯಾಂಕ್ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಕಾರಿನ ಗಾಜು ಒಡೆದು 15 ಲಕ್ಷ ಹಣ ಎಗರಿಸಿ ಪರಾರಿಯಾದ ಘಟನೆ ಶುಕ್ರವಾರದಂದು ಮಂಗಳೂರಿನಲ್ಲಿ ನಡೆದಿದೆ.

ನಗರದ ಚಿಲಿಂಬಿ ಸೌತ್ ಇಂಡಿಯನ್ ಬ್ಯಾಂಕ್ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಕಪ್ಪು ಬಣ್ಣದ ಹುಂಡೈ ಐ20 ಕಾರಿನಲ್ಲಿ 15 ಲಕ್ಷ ರೂ. ಹಣ ಇರಿಸಲಾಗಿತ್ತು ಎನ್ನಲಾಗಿದೆ. ಬೈಕಿನಲ್ಲಿ ಹೆಲ್ಮೆಟ್ ಧರಿಸಿ ಆಗಮಿಸಿದ ಇಬ್ಬರು ಆಗಂತುಕರು ಕಾರಿನ ಗಾಜು ಪುಡಿಗೈದು ದರೋಡೆ ನಡೆಸಿದ್ದಾರೆ. ಈ ಕೃತ್ಯ ಸಿ.ಸಿ. ಟಿವಿಯಲ್ಲಿ ಸೆರೆಯಾಗಿದ್ದು, ಬರ್ಕೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ತನಿಖೆ ಕೈಗೆತ್ತಿಕೊಂಡಿದ್ದಾರೆ.

error: Content is protected !!

Join the Group

Join WhatsApp Group