ಕಾಸರಗೋಡು: ಕೆಎಸ್ಸಾರ್ಟಿಸಿ ಬಸ್-ಬೈಕ್ ಢಿಕ್ಕಿ; ಇಬ್ಬರು ಯುವಕರು ಮೃತ್ಯು

ಕಾಸರಗೋಡು, ಡಿ.15: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಯುವಕರು ಮೃತಪಟ್ಟ ಧಾರುಣ ಘಟನೆ ಮಂಜೇಶ್ವರದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬಳಿ ನಡೆದಿದೆ.

ಮೃತ ಯುವಕರನ್ನು ಕುಡ್ಲು ರಾಮದಾಸ್ ನಗರದ ನಿವಾಸಿಗಳಾದ ಜಗದೀಶ್(22) ಹಾಗೂ ಸುನೀಲ್ (21) ಎಂದು ಗುರುತಿಸಲಾಗಿದೆ.

ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಈ ಕುರಿತು ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top