ಕೆಎಸ್ಸಾರ್ಟಿಸಿ ಬಸ್ – ಬೈಕ್ ನಡುವೆ ಢಿಕ್ಕಿ ➤ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮಂಜೇಶ್ವರ, ಡಿ.15. ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್‌ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್‌ ಸವಾರರಿಬ್ಬರು ಮೃತಪಟ್ಟ ಘಟನೆ ಭಾನುವಾರದಂದು ರಾಷ್ಟ್ರೀಯ ಹೆದ್ದಾರಿ 66 ರ ಮಂಜೇಶ್ವರ ಕರೋಡಾ ಬಳಿ ಸಂಭವಿಸಿದೆ.

ಕಾಸರಗೋಡಿನಿಂದ ಮಂಗಳೂರಿಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ಕುಂಜತ್ತೂರು ಕಡೆಯಿಂದ ಬರುತ್ತಿದ್ದ ಬೈಕ್ ನಡುವೆ ಕರೋಡಾ ಬಳಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಸಹ ಸವಾರ ಆಸ್ಪತ್ರೆಗೆ ಕೊಂಡೊಯ್ಯುವ ಹಾದಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಸ್ಥಳಕ್ಕೆ ಮಂಜೇಶ್ವರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಗಣೇಶ ಚತುರ್ಥಿ- ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸೆ. 19ರಂದು ರಜೆ ಘೋಷಣೆ

error: Content is protected !!
Scroll to Top