ಡಿ.21 ರಂದು ಚಾಕಲೇಟ್ ತಯಾರಿ ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.17  ಸಿರಿ ತೋಟಗಾರಿಕೆ ಸಂಘದ ವತಿಯಿಂದ ಡಿಸೆಂಬರ್ 21 ರಂದು ಚಾಕಲೇಟ್ ತಯಾರಿ (ಹುಟ್ಟುಹಬ್ಬ, ಹೊಸವರ್ಷ, ಕ್ರಿಸ್‍ಮಸ್ ಆಚರಣೆಗಳಲ್ಲಿ ಉಪಯೋಗಿಸುವ ಚಾಕಲೇಟ್ ತಯಾರಿ) ತರಬೇತಿ ಕಾರ್ಯಕ್ರಮವನ್ನು ಬಾಲಭವನ, ಕದ್ರಿ ಉದ್ಯಾನವನದ ಹತ್ತಿರ ಆಯೋಜಿಸಲಾಗಿದೆ.

ಆಸಕ್ತರು ಸಿರಿ ತೋಟಗಾರಿಕೆ ಸಂಘ, ಬೆಂದೂರ್ ವೆಲ್, ಮಂಗಳೂರು ಇಲ್ಲಿ ತರಬೇತಿ ಶುಲ್ಕ ನೀಡಿ ಡಿಸೆಂಬರ್ 20ರ ಒಳಗಾಗಿ ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ರುಕ್ಮಯ ದೂರವಾಣಿ ಸಂಖ್ಯೆ: 9845523944ನ್ನು ಸಂಪರ್ಕಿಸಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ರಾಜ್ಯವಲಯ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಬೆಳ್ತಂಗಡಿ : ಆಶಾ ಕಾರ್ಯಕರ್ತೆ ಮೇಲೆ ಪತಿಯಿಂದಲೇ ಹಲ್ಲೆ

error: Content is protected !!
Scroll to Top