ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ನಾನೇ: ಡಿ.ಕೆ.ಶಿವಕುಮಾರ್ *► ರಾಗ ಬದಲಿಸಿ ತಣ್ಣಗಾದ ಹಾಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.22. 2018ನೇ ಸಾಲಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಅವರು ಮಂಗಳವಾರದಂದು ನೆಲಮಂಗಲ ತಾಲೂಕಿನ ಹಾಲಿಡೇ ಫಾರ್ಮ್ಸ್ ಹೋಟೆಲಿನಲ್ಲಿ ನಡೆದ ಬೃಹತ್ ಕಾಂಗ್ರೆಸ್ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡುತ್ತಿದ್ದರು. ಮಾಗಡಿ ತಾಲೂಕಿನ ಜನರು ಆಸೆ ಪಟ್ಟರೆ ಹಾಗೂ ವಿಧಾನ ಸಭಾ ಚುನಾವಣೆಯಲ್ಲಿ ಮಾಗಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕನನ್ನು ಗೆಲ್ಲಿಸಿದರೆ ಮುಂದಿನ ಮುಖ್ಯಮಂತ್ರಿ ನಾನೇ ಆಗುತ್ತೇನೆ ಎಂದಿದ್ದಾರೆ. ಜೆಡಿಎಸ್ ಪಕ್ಷದಿಂದ ಕಾಂಗ್ರೆಸ್ಗೆ ಬಂದ ಕೇವಲ 3 ವರ್ಷದಲ್ಲೇ ಸಿದ್ದರಾಮಯ್ಯ ಮುಖ್ಯಮಂತ್ರಿಯಾದವರು. ಆದರೂ ನನಗೆ ಮಂತ್ರಿ ಸ್ಥಾನ ಕೊಟ್ಟಿರಲಿಲ್ಲ. ಮೂಲ ಕಾಂಗ್ರೆಸ್ಸಿಗನಾದ ನನಗೆ ಮುಖ್ಯಮಂತ್ರಿಯಾಗುವ ಅರ್ಹತೆ ಇಲ್ವಾ ಎಂದು ಕೇಳುವ ಮೂಲಕ ಸಿಎಂಗೆ ಡಿಕೆಶಿ ಟಾಂಗ್ ನೀಡಿದರು. ಒಟ್ಟಿನಲ್ಲಿ ಕಾಂಗ್ರೆಸ್ ನಾಯಕರಲ್ಲಿಯೂ ವೈಮನಸ್ಸು ಇದೆಯೆನ್ನುವುದನ್ನು ಬಹಿರಂಗವಾಗಿ ತೋರಿಸಿಕೊಟ್ಟರು.

error: Content is protected !!
Scroll to Top