“ಮಂಗಳೂರು ಗೋಲಿಬಾರ್ ನಲ್ಲಿ ಮೃತಪಟ್ಟವರು ಅಪರಾಧಿಗಳಾದಲ್ಲಿ ಒಂದು ರೂ. ಪರಿಹಾರ ನೀಡಲ್ಲ”

  • ಮಂಗಳೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ

ಮಂಗಳೂರು, ಡಿ.25: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಡಿ.9ರಂದು ಮಂಗಳೂರಿನಲ್ಲಿ ನಡೆದಿದ್ದ  ಪ್ರತಿಭಟನೆಯಲ್ಲಿ ಪೊಲೀಸ್‌ ಗುಂಡೇಟಿಗೆ ಬಲಿಯಾದ ಮೃತರಿಬ್ಬರು ಅಪರಾಧಿಗಳು ಎಂದು ಸಾಬೀತಾದರೆ ಒಂದು ರೂಪಾಯಿಯು ಪರಿಹಾರ ಕೊಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ.

ಈ ಬಗ್ಗೆ ಮಂಗಳೂರಿನಲ್ಲಿ ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಅಪರಾಧ ಸಾಬೀತಾದರೆ, ಒಂದು ರೂಪಾಯಿಯು ಕೊಡಲ್ಲ. ಈ ಕುರಿತು ಚರ್ಚೆ ನಡೆಸಿ ಕ್ರಮ ತೆಗೆದುಕೊಳ್ಳುತ್ತೇವೆ. ಮೃತ ಪಟ್ಟವರಿಗೆ ಪರಿಹಾರ ಘೋಷಣೆ ಮಾಡಿಲ್ಲ ಎಂದು ತಿಳಿಸಿದ್ದಾರೆ.

error: Content is protected !!
Scroll to Top