ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿ ಪ್ರವಾಸ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.27   ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಸಣ್ಣ ನೀರಾವರಿ ಇಲಾಖೆಯ ಸಚಿವ ಜೆ.ಸಿ ಮಾಧುಸ್ವಾಮಿ ಇವರ ದ.ಕ ಜಿಲ್ಲಾಪ್ರವಾಸ ಮಾಡಲಿದ್ದಾರೆ.


ಇಂದು ಸಂಜೆ 4.30 ಗಂಟೆಗೆ ಮಂಗಳೂರಿಗೆ ಆಗಮಿಸಿ, 5 ಗಂಟೆಗೆ ಸಕ್ರ್ಯೂಟ್ ಹೌಸ್‍ನಲ್ಲಿ ಲೋಕಸಭಾ ಸದಸ್ಯರು, ಶಾಸಕರು ಹಾಗೂ ಜನಪ್ರತಿನಿಧಿಗಳೊಂದಿಗೆ ಮಂಗಳೂರು ಜಿಲ್ಲೆಯ ಸಣ್ಣ ನೀರಾವರಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ರಾತ್ರಿ 8 ಗಂಟೆಗೆ ಬಂಟ್ವಾಳ ಬಿಸಿರೋಡ್‍ನಲ್ಲಿ ಪಿ. ಜಿನರಾಜ ಅರಿಗ ಇವರ ಮನೆಯ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಜನವರಿ 28 ರಂದು ಬೆಳಿಗ್ಗೆ 8 ಗಂಟೆಗೆ ಮಂಗಳೂರಿನಿಂದ ರಸ್ತೆ ಮೂಲಕ ತಿಪಟೂರಿಗೆ ತೆರಳುವರು.

Also Read  ಸುಳ್ಯ: ಕಾರ್ಯಕರ್ತರ ಶ್ರಮದ ಫಲವಾಗಿ ಗೆಲುವು ಸಿಕ್ಕಿದೆ ➤ ಶಾಸಕಿ ಭಾಗೀರಥಿ ಮುರುಳ್ಯ

error: Content is protected !!
Scroll to Top