ಕಲಬುರಗಿ: ಶಾಲಾ ಮಕ್ಕಳ ಪ್ರವಾಸದ ಬಸ್ ಮರಕ್ಕೆ ಢಿಕ್ಕಿ; ಹತ್ತು ವಿದ್ಯಾರ್ಥಿಗಳಿಗೆ ಗಾಯ

ಕಲಬುರಗಿ, ಜ.2: ಶಾಲಾ ಮಕ್ಕಳು ಪ್ರವಾಸಕ್ಕೆಂದು ಹೊರಟಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಹತ್ತಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿರುವ ಘಟನೆ ಕಲಬುರಗಿ ನಗರದ ವೆಂಕಟಗಿರಿ ಹೊಟೇಲ್ ಬಳಿ ಇಂದು ಬೆಳಗ್ಗೆ ನಡೆದಿದೆ.

ಚನ್ನವೀರ ನಗರದಲ್ಲಿರುವ ಅಯ್ಯಪ್ಪ ಶಾಲೆಗೆ ಸೇರಿದ ಬಸ್ ಇದಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಮರಕ್ಕೆ ಹಿಡಿದಿದೆ ಎನ್ನಲಾಗುತ್ತಿದ್ದು, ಬಸ್ ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಬಸ್ ನಲ್ಲಿ ಹತ್ತಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಘಟನೆಯಿಂದ ವಿದ್ಯಾರ್ಥಿಗಳ ಅಘಾತಗೊಂಡಿದ್ದಾರೆ.

Also Read  ಯುದ್ದಪೀಡಿತ ಉಕ್ರೇನ್ ನಲ್ಲಿ ಕರ್ನಾಟಕದ ವಿದ್ಯಾರ್ಥಿ ಬಲಿ ➤ ಕ್ಯಾಂಪಸ್ ಫ್ರಂಟ್ ನಿಂದ ಮೊಂಬತ್ತಿ ಪ್ರತಿಭಟನೆ

 

ಈ ಬಗ್ಗೆ ಕಲಬುರಗಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

error: Content is protected !!
Scroll to Top