ಪೆರ್ನೆ: ಕಿರು ಸೇತುವೆ ಬಳಿ ಕೆಳಕ್ಕುರುಳಿದ ಖಾಸಗಿ ಬಸ್ ➤ ಪವಾಡ ಸದೃಶವಾಗಿ ಪಾರಾದ 27 ಪ್ರಯಾಣಿಕರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ.04. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಕಿರು ಸೇತುವೆಯಿಂದ ಕೆಳಗೆ ಉರುಳಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪದ ಅಮೈ ಎಂಬಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ.

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಶ್ರೀದುರ್ಗಾ ಸಂಸ್ಥೆಯ ಖಾಸಗಿ ಬಸ್ ಅಮೈ ಕಿರು ಸೇತುವೆ ಪಕ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿದ್ದು, ಕೆಳಕ್ಕೆ ಉರುಳಿ ಬಿದ್ದಿದೆ ಎನ್ನಲಾಗಿದೆ. ಬಸ್ಸಿನಲ್ಲಿ 27 ಮಂದಿ ಪ್ರಯಾಣಿಕರಿದ್ದರೆಂದು ತಿಳಿದುಬಂದಿದ್ದು, ಸಣ್ಣಪುಟ್ಟ ತರಚಿದ ಗಾಯಗಳೊಂದಿಗೆ ಪವಾಡ ಸದೃಶ ಪ್ರಾಣಾಪಾಯದಿಂದ ಪಾರಾಗಿದ್ದಾರೆ‌. ಘಟನೆಯಲ್ಲಿ ಬಸ್ಸಿನ ಒಂದು ಪಾರ್ಶ್ವಕ್ಕೆ ಹಾನಿಯಾಗಿದ್ದು, ರಾತ್ರಿಯೇ ಬಸ್ಸನ್ನು ಮೇಲಕ್ಕೆತ್ತಲಾಗಿದೆ.

Also Read  ದೇವಾಲಯಗಳಲ್ಲಿ ಅರ್ಚಕರಾಗಿ ಮಹಿಳೆಯರ ನೇಮಕ- ಸಿಎಂ ಸ್ಟಾಲಿನ್ ಘೋಷಣೆ

error: Content is protected !!