ಜೆಎನ್‌ಯು ಹಿಂಸಾಚಾರ: ಆರೋಪಿಗಳ ಸುಳಿವು ಲಭ್ಯ



ಹೊಸದಿಲ್ಲಿ, ಜ.7: ಇಲ್ಲಿನ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರ ಮೇಲೆ ಮುಸುಕುಧಾರಿ ಗೂಂಡಾಗಳು ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ದಾಳಿಕೋರರ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ವರೆಗೆ ಯಾರೂ ಬಂಧನಕ್ಕೊಳಗಾಗಿಲ್ಲ. ಆದರೆ, ಪ್ರಕರಣ ಸಂಬಂಧ ಪೊಲೀಸರಿಗೆ ಮಹತ್ವದ ಸುಳಿವುಗಳು ಲಭ್ಯವಾಗಿವೆ ಎಂದು ಹೇಳಲಾಗುತ್ತಿದೆ.





Nk Kukke

ಪ್ರಸ್ತುತ ಪ್ರಕರಣದ ತನಿಖೆ ದೆಹಲಿ ಕ್ರೈಮ್ ಬ್ರಾಂಚ್’ಗೆ ಹಸ್ತಾಂತರಿಸಲಾಗಿದೆ. ಇನ್ನೊಂದೆಡೆ ಜೆಎನ್’ಯು ಹಿಂಸಾಚಾರದ ವಿರುದ್ಧ ದೇಶದಾದ್ಯಂತ ಆಕ್ರೋಷ ವ್ಯಕ್ತವಾಗಿದ್ದು, ರಾಜಕೀಯಕ ಪಕ್ಷಗಳು, ಜನತೆ ಹಾಗೂ ವಿದ್ಯಾರ್ಥಿಗಲು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.






error: Content is protected !!
Scroll to Top