ಬೆಳ್ತಂಗಡಿ: ಅಕ್ರಮ‌ ಮರ ಸಾಗಾಟಕ್ಕೆ ಲಂಚದ ಬೇಡಿಕೆ ➤ ಫಾರೆಸ್ಟ್ ಗಾರ್ಡ್ ಎಸಿಬಿ ಬಲೆಗೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ.08. ಅಕ್ರಮವಾಗಿ ಮರ ಸಾಗಾಟಕ್ಕೆ ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಅರಣ್ಯ ರಕ್ಷಕನೋರ್ವನನ್ನು ಬಂಧಿಸಿದ ಘಟನೆ ಬುಧವಾರದಂದು ಬೆಳ್ತಂಗಡಿಯಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಕಣಿಯೂರು ಬೀಟ್ ಸಿಬ್ಬಂದಿ ಅರಣ್ಯ ರಕ್ಷಕ ಸುಧೀರ್ ಎಂದು ಗುರುತಿಸಲಾಗಿದೆ. ಆರೋಪಿಯು ಬೆಳ್ತಂಗಡಿ ತಾಲೂಕಿನ ಉರುವಾಲು ನಿವಾಸಿ ಸಿದ್ದೀಕ್ ಅಕ್ಬರ್ ಎಂಬವರಿಂದ ಅಕ್ರಮವಾಗಿ ಮರ ಸಾಗಾಟ ಮಾಡುವುದಕ್ಕಾಗಿ 15 ಸಾವಿರ ಲಂಚದ ಬೇಡಿಕೆ ಇಟ್ಟಿದ್ದು, 10 ಸಾವಿರ ರೂ.ಗಳನ್ನು ಪಡೆದಿದ್ದಾರೆ ಎನ್ನಲಾಗಿದೆ. ಬುಧವಾರದಂದು ಮೂರು ಸಾವಿರ ರೂ. ಪಡೆಯುತ್ತಿದ್ದ ವೇಳೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

Also Read  ಉಳ್ಳಾಲ: ಕಳವಾದ ಬೈಕ್-ಮಂಗಳೂರಿನಲ್ಲಿ ಪತ್ತೆ..! ➤ ಮೂವರು ಪೊಲೀಸರ ವಶಕ್ಕೆ

error: Content is protected !!
Scroll to Top