ಲಾರಿಗೆ ಢಿಕ್ಕಿಯಾದ ಕಾರು: ಕಿರುತೆರೆ ನಟಿ, ಸಹ ನಟ ಮೃತ್ಯು ► ಕುಕ್ಕೇ ಸುಬ್ರಹ್ಮಣ್ಯ ದೇವರ ದರ್ಶನಕ್ಕೆ ಆಗಮಿಸುತ್ತಿದ್ದ ನಟರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.24. ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಿರುತುರೆ ನಟಿ ಹಾಗೂ ಸಹನಟ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟು, ನಾಲ್ವರು ಸಹನಟರು ಗಾಯಗೊಂಡ ಘಟನೆ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಲ್ಯಾಂಕೋ ಟೋಲ್‌ ರಸ್ತೆಯ ಸೋಲೂರು ಬಳಿ ಬುಧವಾರ ತಡರಾತ್ರಿ ನಡೆದಿದೆ.

ಮಹಾನದಿ ಧಾರಾವಾಹಿಯಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದ ಮತ್ತು ರು. ಮಧುಬಾಲ, ತ್ರಿವೇಣಿ ಸಂಗಮ ಧಾರಾವಾಹಿಗಳಲ್ಲಿ ಅಭಿನಯಿಸಿದ್ದ ಕಿರುತೆರೆ ನಟಿ ರಚನಾ(23) ಹಾಗೂ ಸಹ ನಟ ಜೀವನ್‌ ಮೃತಪಟ್ಟವರು. ಸಹ ನಟ ಕಾರ್ತಿಕ್‌ ಅವರ ಹುಟುಹಬ್ಬದ ನಿಮಿತ್ತ ಸಫಾರಿ ಕಾರಿನಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನಕ್ಕೆಂದು ತೆರಳುತ್ತಿದ್ದ ವೇಳೆ ಈ ದುರ್ಘ‌ಟನೆ ಸಂಭವಿಸಿದೆ ಎನ್ನಲಾಗಿದೆ. ಸಹ ನಟರಾದ ರಂಜಿತ್‌, ಉತ್ತಮ್‌, ಹೊನ್ನೇಶ್‌, ಕಾರ್ತಿಕ್‌, ಎರಿಕ್‌ ಸಣ್ಣಪುಟ್ಟ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಗಡಿಯ ಕುದೂರು ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

error: Content is protected !!

Join the Group

Join WhatsApp Group