ಸರ್ಕಾರಿ ವಕೀಲರುಗಳ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.11    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಸರ್ಕಾರಿ ಅಭಿಯೋಜಕರು/ಸಹಾಯಕ ಸರ್ಕಾರಿ ವಕೀಲರುಗಳ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಭರ್ತಿ ಮಾಡುವ ಬಗ್ಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಜನವರಿ 21.

ಅರ್ಜಿಗಳು ದ.ಕ ಜಿಲ್ಲೆಯ ಜಿಲ್ಲಾ ನ್ಯಾಯಾಲಯದ ವಕೀಲರ ಸಂಘದಲ್ಲಿ, ಸ್ಥಳಿಯ ನ್ಯಾಯಾಲಯಗಳ ವಕೀಲರ ಸಂಘದಲ್ಲಿ ಹಾಗೂ ಸದಸ್ಯ ಕಾರ್ಯದರ್ಶಿ/ ಸರಕಾರಿ ಅಭಿಯೋಕರು, ಮಂಗಳೂರು ಇವರ ಕಚೇರಿಯಲ್ಲಿ ಲಭ್ಯವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದ.ಕ ಜಿಲ್ಲಾ ನ್ಯಾಯಾಲಯಗಳ/ ವಕೀಲರ ಸಂಘದ ನೋಟೀಸ್ ಬೋರ್ಡ್‍ಗಳಲ್ಲಿ ಹಾಗೂ ಜಿಲ್ಲಾಡಳಿತದ ವೆಬ್‍ಸೈಟ್ ನಲ್ಲಿ ಪಡೆಯಬಹುದು ಎಂದು ಸದಸ್ಯ ಕಾರ್ಯದರ್ಶಿ ಸಹಾಯಕ ಸರ್ಕಾರಿ ಅಭಿಯೋಜಕರುಗಳ ನೇಮಕಾತಿ ಪ್ರಾಧಿಕಾರ ಇವರ ಪ್ರಕಟಣೆ ತಿಳಿಸಿದೆ.

Also Read  ರಜೆ ನೀಡಿದ ಜಿಲ್ಲಾಧಿಕಾರಿಗೆ ಮಕ್ಕಳಿಂದ ಅಭಿನಂದನೆ - ವಿಡಿಯೋ ವೈರಲ್

error: Content is protected !!
Scroll to Top