ಜ.26 ರಂದು ಚಿತ್ರಕಲೆ ಮತ್ತು ವೇಷ ಭೂಷಣ ಸ್ಪರ್ಧೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.21    ಕದ್ರಿ ಜಿಲ್ಲಾ ಬಾಲಭವನದಲ್ಲಿ ಜನವರಿ 26 ರಂದು ಗಣರಾಜ್ಯೋತ್ಸವದ ಅಂಗವಾಗಿ 5 ರಿಂದ 16 ವರ್ಷದೊಳಗಿನ ಮಕ್ಕಳಿಗೆ ಚಿತ್ರಕಲೆ ಮತ್ತು ವೇಷ ಭೂಷಣ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.


ಆಸಕ್ತಿ ಇರುವ ಮಕ್ಕಳು ಜನವರಿ 24 ರ ಒಳಗಾಗಿ ನಿಗದಿತ ನಮೂನೆಯಲ್ಲಿ ಜನನ ಪ್ರಮಾಣ ಪತ್ರ ಹಾಗೂ ಭಾವಚಿತ್ರದೊಂದಿಗೆ ಅರ್ಜಿಯನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದ.ಕ. ಜಿಲ್ಲಾ ಪಂಚಾಯತ್ ಕಟ್ಟಡ ಉರ್ವಸ್ಟೋರ್ ಮಂಗಳೂರು ಇಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 0824-2451254ನ್ನು ಸಂಪರ್ಕಿಸಲು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆ ಹಾಗೂ ಕಾರ್ಯದರ್ಶಿಗಳು, ಜಿಲ್ಲಾ ಬಾಲಭವನ ಸಮಿತಿ ದ.ಕ.ಜಿಲ್ಲೆ., ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

error: Content is protected !!

Join the Group

Join WhatsApp Group