ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ಪ್ರವಾಸ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.23   ದಕ್ಷಿಣ ಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಜನವರಿ 27, 29 ಹಾಗೂ 30 ರಂದು ಜಿಲ್ಲೆಯ ವಿವಿದೆಡೆ ಪ್ರವಾಸ ಕೈಗೊಂಡು ಸಾರ್ವಜನಿಕರಿಂದ ಭ್ರಷ್ಟಾಚಾರ ಸಂಬಂಧಪಟ್ಟ  ದೂರುಗಳನ್ನು ಸ್ವೀಕರಿಸಲಿದ್ದಾರೆ.

ಜನವರಿ 27 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಡಬ ಗ್ರಾಮ ಪಂಚಾಯತ್ ಕಚೇರಿ ಹಾಲ್‍ನಲ್ಲಿ, ಮಧ್ಯಾಹ್ನ 2.30 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ಪುತ್ತೂರು ಸರ್ಕಾರಿ ಪ್ರವಾಸಿ ಮಂದಿರ. ಜನವರಿ 29 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಬೆಳ್ತಂಗಡಿ ಸರ್ಕಾರಿ ಪ್ರವಾಸಿ ಮಂದಿರ, ಮಧ್ಯಾಹ್ನ 2.30 ಗಂಟೆಯಿಂದ 4.30 ಗಂಟೆಯವರೆಗೆ ಬಂಟ್ವಾಳ ಸರ್ಕಾರಿ ಪ್ರವಾಸಿ ಮಂದಿರ. ಜನವರಿ 30 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮೂಡಬಿದ್ರೆ ಸರ್ಕಾರಿ ಪ್ರವಾಸಿ ಮಂದಿರದಲ್ಲಿ  ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದೂರುಗಳನ್ನು ಸ್ವೀಕರಿಸಲಿದ್ದಾರೆ ಎಂದು ಆರಕ್ಷಕ ಉಪಾಧೀಕ್ಷಕರು ಭರತ್ ಎಸ್ ರೆಡ್ಡಿ ಭ್ರಷ್ಟಾಚಾರ ನಿಗ್ರಹ ದಳ ದ.ಕ ಜಿಲ್ಲೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಕಡಬ: ವರದಕ್ಷಿಣೆ ಕಿರುಕುಳ- ಹಲ್ಲೆ ➤ ಪ್ರಕರಣ ದಾಖಲು

error: Content is protected !!
Scroll to Top