ಮಂಗಳೂರು ನಗರ : ಇಂದು ನೀರು ವಿತರಣೆ ಸಂಪೂರ್ಣ ಸ್ಥಗಿತ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.24    ಮಂಗಳೂರು ಮಹಾನಗರಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ ರೇಚಕ ಸ್ಥಾವರದ ಜಾಕ್‍ವೆಲ್‍ನಲ್ಲಿ ಮರಳು, ಕಸಕಡ್ಡಿಗಳು, ಮಡ್ಡಿ ಇತ್ಯಾದಿಗಳು ಶೇಖರಣೆಗೊಂಡಿದ್ದು, ನೀರೆತ್ತುವ ಪಂಪ್ ಚಾಲನೆಯಲ್ಲಿ ಅಡೆತಡೆ ಉಂಟಾಗುತ್ತಿರುವುದನ್ನು ಸರಿಪಡಿಸಲು, ಜಾಕ್‍ವೆಲ್‍ನ್ನು ಶುಚಿಗೊಳಿಸಲು ಇಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಹಮ್ಮಿಕೊಂಡಿದ್ದು, ಈ ಅವಧಿಯಲ್ಲಿ ಮಂಗಳೂರು ನಗರ ಭಾಗಶಃ ಪ್ರದೇಶ, ಕಾಟಿಪಳ್ಳ, ಸುರತ್ಕಲ್ ,ಕಾನ ಬಾಳ, ಕೊಟ್ಟಾರ, ಕೂಳೂರು, ಸಸಿಹಿತ್ಲು ಇತ್ಯಾದಿ ಪ್ರದೇಶಗಳು ಹಾಗೂ ನವಭಾರತ ಸರ್ಕಲ್, ರಥಬೀದಿ, ಬಂದರ್ ಪ್ರದೇಶಗಳಲ್ಲಿ ನೀರು ವಿತರಣೆಯನ್ನು ಸಂಪೂರ್ಣ ಸ್ಥಗಿತಗೊಳಿಸಲಾಗುವುದು ಎಂದು ಮಹಾನಗರಪಾಲಿಕೆ ಆಯುಕ್ತರ ಪ್ರಕಟಣೆ ತಿಳಿಸಿದೆ.

error: Content is protected !!

Join the Group

Join WhatsApp Group