ಬೆರಳಚ್ಚುಗಾರರ ಸೇವೆ – ಅರ್ಹ ಸಂಸ್ಥೆಯಿಂದ ಅರ್ಜಿ ಆಹ್ವಾನ 

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.25    ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ, ಪುತ್ತೂರು ಕಚೇರಿಯಲ್ಲಿ ಬೆರಳಚ್ಚುಗಾರರ ಸೇವೆಯನ್ನು  ಹೊರಗುತ್ತಿಗೆ ಆಧಾರದ ಮೇಲೆ ನಿರ್ವಹಿಸಲು ಅರ್ಹ ಸಂಸ್ಥೆಯಿಂದ ಅರ್ಜಿ ಆಹ್ವಾನಿಸಿದೆ.


ಆಸಕ್ತರು ಫೆಬ್ರವರಿ 20 ರಂದು ಸಂಜೆ 5 ಗಂಟೆ ಒಳಗಾಗಿ ಟೆಂಡರ್ ಮೊಹರು ಮಾಡಿದ ಲಕೋಟೆಯಲ್ಲಿ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 24 ರಂದು ಮಧ್ಯಾಹ್ನ 3 ಗಂಟೆಗೆ ಹಾಜರಿರುವ ಟೆಂಡರುದಾರರ ಸಮಕ್ಷಮ ಪರಿಶೀಲನೆ ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ  ದೂರವಾಣಿ ಸಂಖ್ಯೆ : 08251-230905 ನ್ನು ಸಂಪರ್ಕಿಸಲು ಹಿರಿಯ ತೋಟಗಾರಿಕೆ ನಿರ್ದೇಶಕರು, ಜಿಲ್ಲಾ ಪಂಚಾಯತ್, ಪತ್ತೂರು, ದ.ಕ ಜಿಲ್ಲೆ ಇವರ ಪ್ರಕಟಣೆ ತಿಳಿಸಿದೆ.

Scroll to Top