ಜೀಪ್ ಮತ್ತು ಬೈಕ್ ನಡುವೆ ಅಪಘಾತ ➤ ಮೃತಪಟ್ಟ ಸವಾರ

(ನ್ಯೂಸ್ ಕಡಬ) newskadaba.com, ವೇಣೂರು, ಜ.29    ಬೈಕ್ ಹಾಗೂ ಜೀಪ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕು ಅಳದಂಗಡಿ ಪೇಟೆಯಲ್ಲಿ ನಿನ್ನೆ ನಡೆದಿದೆ.

ಮೋಟಾರು ಸೈಕಲ್ ಸವಾರ ಪಾಸ್ಕಲ್ ಡೇಶಾರವರಿಗೆ ತಲೆಗೆ ಮತ್ತು ಕಾಲಿಗೆ ತೀವ್ರ ಗಾಯಗೊಂಡಿದ್ದು ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದರ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top