ಇಂದು ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ 

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.30    ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಕುಷ್ಠರೋಗ ವಿಭಾಗ) ಮಂಗಳೂರು ಮತ್ತು ಸರ್ಕಾರಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ ಕುಷ್ಠರೋಗದ ವಿರುದ್ಧ ಅಂತಿಮ ಯುದ್ಧ ಎಂಬ ಘೋಷಣೆಯೊಂದಿಗೆ ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ-2020 ಕಾರ್ಯಕ್ರಮ ಜನವರಿ 30 ರಂದು ಬೆಳಿಗ್ಗೆ 9.30 ಗಂಟೆಗೆ ಆರ್.ಎ.ಪಿ.ಸಿ.ಸಿ ಕಾನ್ಫರೆನ್ಸ್ ಹಾಲ್ (3ನೇ ಮಹಡಿ) ಸರ್ಕಾರಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ದ.ಕ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ| ಸೆಲ್ವಮಣಿ. ಆರ್ ಉದ್ಘಾಟಿಸಲಿದ್ದಾರೆ. ಸರ್ಕಾರಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಅಧೀಕ್ಷಕಿ ಡಾ. ರಾಜೇಶ್ವರಿ ದೇವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

error: Content is protected !!
Scroll to Top