ಆಂಬ್ಯುಲೆನ್ಸ್ – ಸ್ಕೂಟರ್ ಢಿಕ್ಕಿ ➤ ಮಹಿಳೆ ಮೃತ್ಯು, ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.30. ಆಂಬುಲೆನ್ಸ್ ಒಂದು ಸ್ಕೂಟರ್ ಗೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟು, ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳೂರಿನಲ್ಲಿ ಗುರುವಾರದಂದು ನಡೆದಿದೆ.

ಮೃತ ಮಹಿಳೆಯನ್ನು ಗುರುಪುರ ನಿವಾಸಿ ಸುಜಾತ ಎಂದು ಗುರುತಿಸಲಾಗಿದೆ. ನಗರದ ಖಾಸಗಿ ಆಸ್ಪತ್ರೆಯಿಂದ ಕೇರಳಕ್ಕೆ ಮೃತದೇಹವನ್ನು ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ನಗರದ ಕೆಪಿಟಿ ಸಿಗ್ನಲ್ ಬಳಿ ಸ್ಕೂಟರ್ ಗೆ ಹಿಂದಿನಿಂದ ಢಿಕ್ಕಿ ಹೊಡೆದು ಸುಮಾರು 50 ಮೀಟರ್ ನಷ್ಟು ದೂರ ಎಳೆದೊಯ್ದಿದೆ. ಘಟನೆಯಲ್ಲಿ ಸ್ಕೂಟರ್ ಸವಾರ ಗಂಭೀರ ಗಾಯಗೊಂಡಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕದ್ರಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಕರಾವಳಿಯಲ್ಲಿ ಮತ್ತೆ ತಲವಾರು ದಾಳಿ ➤ ಯುವಕನಿಗೆ ಮಾರಣಾಂತಿಕ ಹಲ್ಲೆ- ಪರಿಚಯಸ್ಥರಿಂದಲೇ ಕೃತ್ಯ...!

error: Content is protected !!
Scroll to Top