ಫೆ.19 ಮತ್ತು 20ರಂದು ಅರಂತೋಡಿನಲ್ಲಿ ದ್ಸಿಕ್ರ್ ಸ್ವಲಾತ್ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಫೆ. 16. ಸುಳ್ಯ. ಅರಂತೋಡು ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಪ್ರತೀ ತಿಂಗಳಿಗೊಮ್ಮೆ ಶೇಕ್ ಮುಹಿಯ್ಯದ್ದೀನ್ ಜಿಸ್ತಿ ಅಜೀರ್ ಖ್ವಾಜಾರವರ ಹೆಸರಿನಲ್ಲಿ ಆಚರಿಸಿಕೊಂಡು ಬರುತ್ತಿರುವ ದ್ಸಿಕ್ರ್ ಸ್ವಲಾತ್ ಮಜ್ಲಿಸ್ ಕಾರ್ಯಕ್ರಮ ಹಾಗೂ ಏಕದಿನ ಮತಪ್ರಭಾಷಣ ಕಾರ್ಯಕ್ರಮವು ಫೆಬ್ರವರಿ 19 ಮತ್ತು 20 ರಂದು ಅರಂತೋಡು ಮಸೀದಿ ವಠಾರದಲ್ಲಿ ನಡೆಯಲಿದೆ.

ಫೆ.19 ರಂದು ರಾತ್ರಿ 7 ಗಂಟೆಗೆ ಕಲ್ಲೆಗ ಜುಮ್ಮಾಮಸೀದಿ ಖತೀಬರಾದ ಬಹು ಉಸ್ತಾದ್ ಅಬೂಬಕ್ಕರ್ ಸಿದ್ದೀಕ್ ಜಲಾಲಿಯವರಿಂದ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ನಡೆಯಲಿದ್ದು, ಫೆ.20 ರಂದು ಮಗ್ರಿಬ್ ನಮಾಝಿನ ಬಳಿಕ ನಡೆಯುವ ಸ್ವಲಾತ್ ಮಜ್ಲಿಸ್ ಕಾರ್ಯಕ್ರಮಕ್ಕೆ ಬಹು ಶೈಖುನಾ ನಾಲಾಂಗೇರಿ ಉಸ್ತಾದ್ ಕಣ್ಣೂರು, ಕೇರಳ ರವರ ನೇತೃತ್ವದಲ್ಲಿ ನಡೆಯಲಿದೆ. ಬಹು ಡಾ| ಅಹ್ಮದ್ ಕಬೀರ್ ಬಾಖವಿ ಅಲ್ ಬಾನಿ ಕೇರಳ ಇವರಿಂದ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ ಖತೀಬರಾದ ಬಹು ಅಲ್ ಹಾಜ್ ಇಸ್ ಹಾಕ್ ಬಾಖವಿ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಪೆರಾಜೆ ಜುಮ್ಮಾ ಮಸೀದಿ ಖತೀಬರಾದ ಬಹು ಅಬೂಬಕ್ಕರ್ ಸಖಾಫಿ, ಪೇರಡ್ಕ ಜುಮ್ಮಾ ಮಸೀದಿ ಖತೀಬರಾದ ಅಲ್ಹಾಜ್ ಅಶ್ರಫ್ ಫೈಝಿ, ಕಲ್ಲುಗಂಡಿ ಜುಮ್ಮಾ ಮಸೀದಿ ಖತೀಬರಾದ ಬಹು ಅಬ್ದುಲ್ ಅಝೀಝ್ ಬಾಖವಿ, ಸಂಪಾಜೆ ಜುಮ್ಮಾಮಸೀದಿ ಖತೀಬರಾದ ಬಹು ಅಲ್ ಜಮಾಲುದ್ದೀನ್ ಅಮಾನಿ, ನವಾಜ್ ದಾರಿಮಿ, ಬಶೀರ್ ಮದನಿ, ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷ ಅಶ್ರಫ್ ಗುಂಡಿ, ತೆಕ್ಕಿಲ್ ಪ್ರತಿಷ್ಠಾನ ಅಧ್ಯಕ್ಷ ಟಿ.ಎಮ್. ಶಹೀದ್, ಅರಂತೋಡು ಜಮಾಅತ್ ಉಪಾಧ್ಯಕ್ಷ ಹಾಜಿ ಕೆ.ಎಮ್. ಮಹಮ್ಮದ್, ದ್ಸಿಕ್ರ್ ಸ್ವಲಾತ್ ಸಮಿತಿ ಉಪಾಧ್ಯಕ್ಷ ಕೆ.ಎಮ್ ಅಬೂಬಕ್ಕರ್, ಜಮಾಅತ್ ಕಾರ್ಯದರ್ಶಿ ಕೆ.ಎಮ್. ಮೂಸಾನ್, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ಅಧ್ಯಕ್ಷ ಅಬ್ದುಲ್ ಮಜೀದ್, ಎಸ್ ಕೆ ಎಸ್ಎಸ್ ಎಫ್ ಅರಂತೋಡು ಶಾಖೆಯ ಅಧ್ಯಕ್ಷರಾದ ತಾಜುದ್ದೀನ್ ಎಸ್ ಅರಂತೋಡು, ಯುವ ಉದ್ಯಮಿ ಯು.ಎ.ಇ. ಸೈಫುದ್ದೀನ್ ಪಠೇಲ್ ಸೇರಿದಂತೆ ಹಲವು ಉಲಮಾ ಉಮರಾ ನೇತಾರರು ಭಾಗವಹಿಸಲಿದ್ದಾರೆ.

error: Content is protected !!

Join the Group

Join WhatsApp Group