Breaking: ಕೆಎಸ್ಸಾರ್ಟಿಸಿ ವೋಲ್ವೋ – ಕಂಟೇನರ್ ನಡುವೆ ಭೀಕರ ಅಪಘಾತ ➤ 16 ಮಂದಿ ಮೃತ್ಯು, ಹಲವರು ಗಂಭೀರ

(ನ್ಯೂಸ್ ಕಡಬ) newskadaba.com ತಮಿಳುನಾಡು, ಫೆ.20. ಬೆಂಗಳೂರಿನಿಂದ ಕೇರಳದ ಕೊಚ್ಚಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ವೋಲ್ವೋ ಬಸ್ ಹಾಗೂ ಕಂಟೇನರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ 16 ಮಂದಿ ಪ್ರಯಾಣಿಕರು ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ತಮಿಳುನಾಡಿನ ತಿರುಪುರ್ ನಲ್ಲಿ ಗುರುವಾರ ಬೆಳಗಿನ ಜಾವ ನಡೆದಿದೆ.

ಬೆಂಗಳೂರಿನಿಂದ ಬುಧವಾರ ರಾತ್ರಿ ಹೊರಟಿದ್ದ ಕೇರಳ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಸಾರ್ಟಿಸಿ) ಗೆ ಸೇರಿದ ವೋಲ್ವೋ ಬಸ್ ತಮಿಳುನಾಡಿನ ತಿರುಪುರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ವೇಳೆ ಬೃಹತ್ ಕಂಟೇನರ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ 16 ಮಂದಿ ಪ್ರಯಾಣಿಕರು ಮೃತಪಟ್ಟಿದ್ದು, ಹಲವರು ಗಂಭೀರ ಗಾಯಗೊಂಡಿದ್ದಾರೆ. ಬಸ್ಸಿನಲ್ಲಿ 40 ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎನ್ನಲಾಗಿದೆ. ಘಟನೆಗೆ ಕಾರಣ ತನಿಖೆಯ ನಂತರವಷ್ಟೇ ತಿಳಿದು ಬರಬೇಕಿದೆ.

error: Content is protected !!

Join the Group

Join WhatsApp Group