ಕಡಬ ತಾ| ಸಾಹಿತ್ಯ ಸಮ್ಮೇಳನಕ್ಕೆ ಸಮ್ಯಕ್ತ್ ಜೈನ್ ಆಯ್ಕೆ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಫೆ.24. ಕಡಬ ತಾಲೂಕಿನ ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದಲ್ಲಿ ಫೆ.28, 29ರಂದು ನಡೆಯಲಿರುವ ಕಡಬ ತಾಲೂಕು ಪ್ರಥಮ ಸಾಹಿತ್ಯ ಸಮ್ಮೇಳನದಲ್ಲಿ ನಡೆಯುವ ವಿದ್ಯಾರ್ಥಿ ಕವಿಗೋಷ್ಠಿಯಲ್ಲಿ ಭಾಗವಹಿಸಲು ಯುವ ಕವಿ, ಲೇಖಕ, ಸಾಹಿತಿ ನೂಜಿಬಾಳ್ತಿಲ ಬೆಥನಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಮ್ಯಕ್ತ್ ಹೆಚ್.ಜೈನ್ ಅವರು ಆಯ್ಕೆಯಾಗಿರುತ್ತಾರೆ. ಇವರು ನೂಜಿಬಾಳ್ತಿಲ ಗ್ರಾಮದ ಧರಣೇಂದ್ರ ಇಂದ್ರ ಹಾಗೂ ಮಂಜುಳಾ ದಂಪತಿ ಪುತ್ರ.

Scroll to Top