ಕುಮಾರಧಾರ ನದಿಯಲ್ಲಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಫೆ.27. ಸ್ನಾನಕ್ಕೆಂದು ತೆರಳಿದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕುಮಾರಧಾರ ನದಿಯಲ್ಲಿ ಗುರುವಾರದಂದು ನಡೆದಿದೆ.

ಮೃತಪಟ್ಟ ಯುವಕನನ್ನು ಕೊಯಿಲ ಗ್ರಾಮದ ಜನತಾ ಕಾಲೋನಿ ನಿವಾಸಿ ಯೂಸುಫ್ ಎಂಬವರ ಪುತ್ರ ಅರ್ಫಾಝ್ (22) ಎಂದು ಗುರುತಿಸಲಾಗಿದೆ. ಅರ್ಫಾಝ್ ಗುರುವಾರದಂದು ತನ್ನ ಸ್ನೇಹಿತರೊಂದಿಗೆ ಸ್ನಾನಕ್ಕೆಂದು ಕೊಯಿಲ ಗ್ರಾಮದ ಸುದೆಂಗಳ ಸಮೀಪ ಕುಮಾರಧಾರ ನದಿಗಿಳಿದಿದ್ದು, ಕಣ್ಮರೆಯಾಗಿದ್ದಾನೆ ಎನ್ನಲಾಗಿದೆ. ವಿಚಾರ ತಿಳಿದ ಕಡಬ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಸ್ಥಳೀಯ ಮುಳುಗು ತಜ್ಞರ ಸಹಕಾರದೊಂದಿಗೆ ನದಿಯಲ್ಲಿ ಶೋಧ ಕಾರ್ಯ ನಡೆಸಿ ಮೃತದೇಹವನ್ನು ಮೇಲಕ್ಕೆತ್ತಲಾಯಿತು.

error: Content is protected !!
Scroll to Top