ಪುತ್ತೂರು: ಬಸ್ – ಬೈಕ್‌ ನಡುವೆ ಢಿಕ್ಕಿ ➤ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ.02. ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್‌ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ಎಂಬಲ್ಲಿ ಸೋಮವಾರದಂದು ಸಂಭವಿಸಿದೆ.

ಮೃತ‌ ಸವಾರನನ್ನು ಸುಳ್ಯ ತಾಲೂಕಿನ ಮರ್ಕಂಜ ನಿವಾಸಿ ಚಂದ್ರಶೇಖರ್ ಗೌಡ ಎಂದು ಗುರುತಿಸಲಾಗಿದೆ. ಕಾವು ಸಮೀಪದ ಮದ್ಲ ಎಂಬಲ್ಲಿ ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!

Join WhatsApp Group

WhatsApp Share