ಹಿರಿಯಡ್ಕ: ಕೀಟನಾಶಕ ಸೇವಿಸಿ ರೈತ ಆತ್ಮಹತ್ಯೆ

ಉಡುಪಿ, ಮಾ.2: ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಫಲಕಾರಿಯಾಗದೆ ರೈತನೋರ್ವ ಮೃತಪಟ್ಟ ಘಟನೆ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


ಮೃತ ರೈತನನ್ನು ಪೆರ್ಡೂರು ಗ್ರಾಮದ ಮೂಡು ಜೆಡ್ಡು ಮನೆ ನಿವಾಸಿ ಗುಂಡು ನಾಯ್ಕಾ (58) ಎಂದು ಗುರುತಿಸಲಾಗಿದೆ. ಮೃತರು ತೋಟ ಹಾಗೂ ಕೃಷಿ ಕೆಲಸ ಮಾಡಿಕೊಂಡಿದ್ದು, ಕೃಷಿಗಾಗಿ ಸಾಲ ಮಾಡಿದ್ದರು ಎಂದು ತಿಳಿದುಬಂದಿದೆ. ಕೃಷಿಯಲ್ಲಿ ಸರಿಯಾದ ಆದಾಯ ಬಾರದೇ ಇದ್ದುದರಿಂದ ಸಾಲ ತೀರಿಸಲು ಸಾಧ್ಯವಿಲ್ಲದೇ ನೊಂದುಕೊಂಡಿದ್ದು, ಆಗ್ಗಾಗೆ ಸಾಯುವ ಮಾತನಾಡುತ್ತಿದ್ದರು ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!

Join the Group

Join WhatsApp Group