ಎಎಪಿ ಕೌನ್ಸಿಲರ್ ತಾಹಿರ್ ಹುಸೈನ್ ನ್ಯಾಯಾಲಯಕ್ಕೆ ಶರಣು

ಹೊಸದಿಲ್ಲಿ, ಮಾ.6: ಪೌರತ್ವ ತಿದ್ದುಪಡಿ ಕಾಯ್ದೆ ಸಂಬಂಧ ದಿಲ್ಲಿಯಲ್ಲಿ ನಡೆದ ಹಿಂಸಾಚಾರದ ವೇಳೆ ಗುಪ್ತಚರ ಇಲಾಖೆ(ಐಬಿ)ಯ ಅಧಿಕಾರಿಯನ್ನು ಹತ್ಯೆಗೈದ ಆರೋಪ ಎದುರಿಸುತ್ತಿರುವ ಆಮ್ ಆದ್ಮಿ ಪಕ್ಷದ ಕೌನ್ಸಿಲರ್ ತಾಹಿರ್ ಹುಸೈನ್ ನ್ಯಾಯಾಲಯಕ್ಕೆ ಶರಣಾದರು.

ಈಶಾನ್ಯ ದಿಲ್ಲಿಯಲ್ಲಿ ಗುಪ್ತಚರ ಇಲಾಖೆಯ ಅಧಿಕಾರಿ ಅಂಕಿತ್ ಶರ್ಮಾ ಹತ್ಯೆಗೀಡಾಗಿದ್ದರು. ಈ ಆರೋಪದ ಮೇಲೆ ತಾಹಿರ್ ಹುಸೈನ್ ವಿರುದ್ಧ ಕೊಲೆ ಮತ್ತು ಗಲಭೆ ಪ್ರಕರಣ ದಾಖಲಾಗಿತ್ತು. ಅಂಕಿತ್ ಶರ್ಮಾ ಹತ್ಯೆ ಹಿಂದೆ ತಾಹಿರ್ ಕೈವಾಡ ಇದೆ ಎಂದು ತಂದೆ ರವೀಂದ್ರ ಶರ್ಮಾ ಆರೋಪಿಸಿದ್ದರು.

Also Read  ಎರಡು ದಿನಗಳ ರಾಜ್ಯ ಪ್ರವಾಸಕ್ಕೆ ಆಗಮಿಸಿದ ಗೃಹ ಸಚಿವ ಅಮಿತ್ ಶಾ..!

ಈ ಹಿನ್ನೆಲೆಯಲ್ಲಿ ತಾಹಿರ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಇನ್ನು ತಾಹಿರ್ ವಿರುದ್ಧ ಕೊಲೆ ಆರೋಪ ವ್ಯಕ್ತವಾದ ಹಿನ್ನೆಲೆಯಲ್ಲಿ ಆತನನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತು ಮಾಡಲಾಗಿತ್ತು.

error: Content is protected !!
Scroll to Top