ಮುಳುಗಡೆಯಾದ ನೆಟ್ಟಣ ಕಿರು ಸೇತುವೆ ► ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಬಂದ್

(ನ್ಯೂಸ್ ಕಡಬ), newskadaba.com ಕಡಬ, ಆ.28. ಧರ್ಮಸ್ಥಳ – ಸುಬ್ರಹ್ಮಣ್ಯ ದೇವಸ್ಥಾನವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿಯ ನೆಟ್ಟಣ ಎಂಬಲ್ಲಿನ ಕಿರು ಸೇತುವೆಯು ಜಲಾವೃತಗೊಂಡಿದ್ದು, ರಸ್ತೆ ತಡೆ ಉಂಟಾಗಿದೆ.

ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಸೇತುವೆಯ ಮೇಲಿನಿಂದ ನೀರು ಹರಿಯುತ್ತಿದೆ. ಇದರಿಂದಾಗಿ ಧರ್ಮಸ್ಥಳ, ಸುಬ್ರಹ್ಮಣ್ಯ ದೇವಸ್ಥಾನಗಳನ್ನು ಹಾಗೂ ಉಪ್ಪಿನಂಗಡಿ, ಮಂಗಳೂರು ಪ್ರಯಾಣಿಸುವ ಪ್ರಯಾಣಿಕರು ಸಂಕಷ್ಟಕ್ಕೊಳಗಾಗಿದ್ದು, ನೀರು ಕಡಿಮೆಯಾಗುವವರೆಗೆ ಕಾಯಬೇಕಾಗಿದೆ.

Also Read  ಕಲ್ಲುಗುಡ್ಡೆ: ಕೃಷ್ಣ ಜನ್ಮಾಷ್ಠಮಿ ಸಮಿತಿ ರಚನೆ ➤ ಅಧ್ಯಕ್ಷರಾಗಿ ಜಯಂತ್ ಬರೆಮೇಲು

error: Content is protected !!
Scroll to Top