ಬೆಳ್ಳಾರೆ: ರಬ್ಬರ್ ಕಾರ್ಮಿಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಮಾ.17. ಠಾಣಾ ವ್ಯಾಪ್ತಿಯ ಸವಣೂರು ಗ್ರಾಮದ ಇಡ್ಯಾಡಿ ಎಂಬಲ್ಲಿ ರಬ್ಬರ್ ಕಾರ್ಮಿಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ನಡೆದಿದ್ದು, ಮಂಗಳವಾರ ಪ್ರಕರಣ ಬೆಳಕಿಗೆ ಬಂದಿದೆ.

ಆತ್ಮಹತ್ಯೆ ಮಾಡಿಕೊಂಡ ಕಾರ್ಮಿಕನನ್ನು ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಪಾನತ್ತಿಲ ಕಬ್ಬಿನಡ್ಕ ನಿವಾಸಿ ಉಮೇಶ್ (29) ಎಂದು ಗುರುತಿಸಲಾಗಿದೆ. ಈತ ಎರಡು ತಿಂಗಳ ಹಿಂದೆ ಇಡ್ಯಾಡಿಯ ಪದವು ಎಂಬಲ್ಲಿನ ಫಾರ್ಮ್ ಒಂದರ ರಬ್ಬರ್ ತೋಟದ ಟ್ಯಾಪರ್ ಆಗಿ ಕೆಲಸಕ್ಕೆ ಸೇರಿಕೊಂಡಿದ್ದರು. ವಿವಾಹಿತರಾಗಿದ್ದ ಮೃತರು ಮದ್ಯಸೇವನೆಯ ಚಟ ಹೊಂದಿದ್ದು, ಆರ್ಥಿಕ ಮುಗ್ಗಟ್ಟಿನಿಂದ ಇದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಮನೆಯ ಪಕ್ಕದಲ್ಲಿದ್ದ ರಬ್ಬರ್ ಮರದ ರೆಂಬೆಗೆ ಲುಂಗಿಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಸೋಮವಾರ ರಾತ್ರಿ ಈ ಕೃತ್ಯ ನಡೆದಿದ್ದು ಮಂಗಳವಾರ ಪ್ರಕರಣ ಬೆಳಕಿಗೆ ಬಂದಿದೆ. ಮೃತರ ಸಹೋದರ ರಮೇಶ್ ಎಂಬವರು ನೀಡಿದ ದೂರಿನಂತೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಸುಳ್ಯ ಸರ್ಕಲ್ ಇನ್‍ಸ್ಪೆಕ್ಟರ್ ನವೀನ್‍ಚಂದ್ರ ಜೋಗಿ, ಬೆಳ್ಳಾರೆ ಸಬ್ ಇನ್‍ಸ್ಪೆಕ್ಟರ್ ಆಂಜನೇಯ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಗೃಹರಕ್ಷಕರು ಸಮರ್ಪಣಾ ಮನೋಭಾವದಿಂದ ಕರ್ತವ್ಯ ನಿರ್ವಹಿಸುತ್ತಾರೆ - ಅಖಿಲ ಭಾರತ ಗೃಹರಕ್ಷಕದಳ ದಿನಾಚರಣೆ ಉದ್ಘಾಟಿಸಿ ಡಾ.ಸಂತೋಷ್ ಕುಮಾರ್

error: Content is protected !!
Scroll to Top