ಕೊರೋನ ಹಿನ್ನೆಲೆ: ಎಸೆಸೆಲ್ಸಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು, ಮಾ.22: ಕೊರೋನ ವೈರಸ್ ಭೀತಿ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದಲ್ಲಿ ಮಾ. 27ರಿಂದ ನಿಗದಿಯಾಗಿದ್ದ ಎಸೆಸೆಲ್ಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಇಂದು ಬೆಳಗ್ಗೆ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಹಾಗೂ ಡಾ.ದೇವಿಪ್ರಸಾದ್ ಅವರೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ತೀರ್ಮಾನ ಕೈಗೊಂಡಿದ್ದಾರೆ. ಇದರ ಜೊತೆಗೆ, ವಿವಿಧ ನೇಮಕಾತಿಗಳಿಗೆ ಸಂಬಂಧಿಸಿದ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ.

error: Content is protected !!

Join the Group

Join WhatsApp Group