ಸುಳ್ಯ ಶಾಸಕ ಎಸ್ ಅಂಗಾರ ರಕ್ತದೊತ್ತಡದಿಂದ ದಿಢೀರ್ ಅಸ್ವಸ್ಥ ➤ 108 ಆಂಬ್ಯುಲೆನ್ಸ್ ಮೂಲಕ ಪುತ್ತೂರು ಆಸ್ಪತ್ರೆಗೆ

(ನ್ಯೂಸ್ ಕಡಬ) newskadaba.com ಕಡಬ, ಮಾ.27. ಪಡಿತರ ವ್ಯವಸ್ಥೆಯ ಕುರಿತು ಸಹಕಾರಿ ಸಂಘಗಳ ಮುಖ್ಯಸ್ಥರ ಸಭೆ ನಡೆಸುತ್ತಿದ್ದ ವೇಳೆ ರಕ್ತದೊತ್ತಡ ಕಡಿಮೆಯಾಗಿ ಸುಳ್ಯ ಶಾಸಕ ಎಸ್.ಅಂಗಾರ ಅಸ್ವಸ್ಥಗೊಂಡ ಘಟನೆ ಶುಕ್ರವಾರದಂದು ಕಡಬದಲ್ಲಿ ನಡೆದಿದೆ.

ಕಡಬದಲ್ಲಿ ನಡೆದ ಅಧಿಕಾರಿಗಳು, ವರ್ತಕರು ಹಾಗೂ ಜನಪ್ರತಿನಿಧಿಗಳ ಸಭೆಯ ಬಳಿಕ ಕಡಬದ ಸಹಕಾರಿ ಸಂಘಗಳ ಮುಖ್ಯಸ್ಥರ ಸಭೆ ನಡೆಸುತ್ತಿದ್ದ ವೇಳೆ ದಿಢೀರ್ ರಕ್ತದೊತ್ತಡ ಕಡಿಮೆಯಾಗಿದೆ‌. ತಕ್ಷಣವೇ 108 ಆಂಬ್ಯುಲೆನ್ಸ್ ಮೂಲಕ ಪುತ್ತೂರಿನ ಪ್ರಗತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.

Scroll to Top