ಬಂಟ್ವಾಳ; ಕೊರೋನ ಹರಡುವ ಭೀತಿ: ವ್ಯಕ್ತಿ ಆತ್ಮಹತ್ಯೆ

ಬಂಟ್ವಾಳ, ಮಾ.27: ಕೊರೋನ ವೈರಸ್ ಆತಂಕದಿಂದ ವ್ಯಕ್ತಿಯೊಬ್ಬರು ಮಾನಸಿಕ ಖಿನ್ನತೆಗೆ ಒಳಗಾಗಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಅಬೆಟ್ಟಿನಲ್ಲಿ ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಸ್ಥಳೀಯ ನಿವಾಸಿ ಸದಾಶಿವ ಶೆಟ್ಟಿ (55)ಎಂದು ಗುರುತಿಸಲಾಗಿದೆ. ಕೊರೋನ ವೈರಸ್ ಹರಡುತ್ತಿರುವ ಬಗ್ಗೆ ಚಿಂತೆಗೀಡಾಗಿದ್ದ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಮಾ.26ರ ರಾತ್ರಿ ಮನೆಯ ಗೋಡೆ ಮೇಲೆ ಚೀಟಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪೆಟ್ರೋಲ್ ಬಂಕೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಅವರು ಕಳೆದ ಎರಡು ದಿನಗಳ ಹಿಂದೆಯೂ ಆತ್ಯಹತ್ಯೆಗೆ ಪ್ರಯತ್ನಿಸಿದರು ಎನ್ನಲಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!

Join the Group

Join WhatsApp Group