ನೆಲ್ಯಾಡಿ: ಟ್ಯಾಂಕರ್ ಪಲ್ಟಿಯಾಗಿ ಗ್ಯಾಸ್ ಸೋರಿಕೆ ➤ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ.28. ಗ್ಯಾಸ್ ಟ್ಯಾಂಕರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೆದ್ರೋಡಿ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದೆ.

ಗ್ಯಾಸ್ ಟ್ಯಾಂಕರ್ ಹೆದ್ದಾರಿಗೆ ಅಡ್ಡ ಬಿದ್ದುದರಿಂದ ಗ್ಯಾಸ್ ಸೋರಿಕೆ ಉಂಟಾಗಿದ್ದು, ಉಪ್ಪಿನಂಗಡಿಯಲ್ಲಿದ್ದ HPCL ಕಂಪೆನಿಯ ಅಧೀನದಲ್ಲಿದ್ದ ತುರ್ತು ಪರಿಸ್ಥಿತಿ ವಾಹನದವರು ಸ್ಥಳಕ್ಕೆ ಆಗಮಿಸಿ ಗ್ಯಾಸ್ ಸೋರಿಕೆಯನ್ನು ತಡೆಗಟ್ಟಲು ವ್ಯವಸ್ಥೆ ಮಾಡುತ್ತಿದ್ದಾರೆ‌. ಘಟನೆಯಲ್ಲಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ.

Also Read  ಅಪಘಾತವನ್ನು ತಪ್ಪಿಸುವ ಭರದಲ್ಲಿ ಕಾವೇರಿ ನದಿಗೆ ಉರುಳಿದ ಕಾರು ► ನಾಲ್ವರು ಅಪಾಯದಿಂದ ಪಾರು

error: Content is protected !!
Scroll to Top