ನಾಳೆಯಿಂದ ಲಾಕ್​ಡೌನ್​ ಮತ್ತಷ್ಟು ಬಿಗಿ: ಸಿಎಂ ಯಡಿಯೂರಪ್ಪ

ಬೆಂಗಳೂರು, ಎ.14: ಮೇ 3ರವರೆಗೆ ಲಾಕ್​ಡೌನ್​ ವಿಸ್ತರಣೆ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ. ಕೇಂದ್ರದ ಮಾರ್ಗಸೂಚಿಗಳನ್ನ ನಾವು ಪಾಲಿಸುತ್ತೇವೆ. ಇಂದಿನಿಂದ ಮತ್ತಷ್ಟು ಕಠಿಣ ಕ್ರಮಕ್ಕೆ ಮುಂದಾಗುತ್ತೇವೆ ಎಂದು ಸಿಎಂ ಬಿಎಸ್​ ಯಡಿಯೂರಪ್ಪ ಹೇಳಿದ್ದಾರೆ.

ಇಂದು ಪ್ರಧಾನಿ ಭಾಷಣದ ಬೆನ್ನಲ್ಲೇ ಸುದ್ದಿಗೋಷ್ಟಿ ನಡೆಸಿ ಮಾತನಾಡಿ ಅವರು, ಮೋದಿ ಹೇಳಿದ ಸಪ್ತಸೂತ್ರಗಳನ್ನ ನಾವು ಪಾಲಿಸುತ್ತೇವೆ ಎಂದು ಹೇಳಿದ್ರು. ಎಪ್ರಿಲ್​ 20ರವರೆಗೆ ಇನ್ನಷ್ಟು ಕಟ್ಟುನಿಟ್ಟಾಗಿ ಲಾಕ್​ಡೌನ್​ ಪಾಲಿಸಲಾಗುತ್ತದೆ. ನಾಳೆ ಕೇಂದ್ರದ ಮಾರ್ಗಸೂಚಿ ಬರಲಿದ್ದು, ಅದರ ಆಧಾರದ ಮೇಲೆ ಇನ್ನೂ ಏನೆಲ್ಲಾ ಕ್ರಮಗಳನ್ನ ಕೈಗೊಳ್ಳಬೇಕೋ ಅದನ್ನ ತೆಗೆದುಕೊಳ್ಳುತ್ತೇವೆ ಎಂದು ಬಿಎಸ್​ವೈ ಹೇಳಿದ್ರು. ಕೃಷಿಕರಿಗೆ ತೊಂದರೆಯಾಗದಂತೆ ನಾವು ರಸಗೊಬ್ಬರ, ಬೀಜದ ವ್ಯವಸ್ಥೆ ಮಾಡಿದ್ದೇವೆ. ಪೌರಕಾರ್ಮಿಕರು ಪೊಲೀಸರಿಗೆ ಗೌರವ ಕೊಡುವಂತೆ ಮೋದಿ ಹೇಳಿದ್ದಾರೆ.

ವಲಸೆ ಕಾರ್ಮಿಕರು ಎಲ್ಲಿದ್ದಾರೋ ಅಲ್ಲೇ ಇರಬೇಕೆಂದು ಮನವಿ ಮಾಡಿದ್ದಾರೆ. ಇವೆಲ್ಲವನ್ನೂ ಪಾಲಿಸಬೇಕು ಎಂದರು. ಈವರೆಗೆ ಲಾಕ್​ಡೌನ್​ ಪಾಲಿಸದ 55 ಸಾವಿರದ 633 ವಾಹನಗಳನ್ನ ಜಪ್ತಿ ಮಾಡಲಾಗಿದೆ, 4169 ಜನರ ವಿರುದ್ಧ ಕೇಸ್​ದ ದಾಖಲಾಗಿದೆ, 2185 ಜನರನ್ನ ಬಂಧಿಸಲಾಗಿದೆ. 95 ಲಕ್ಷ ರೂಪಾಯಿ ದಂಡ ವಸೂಲಿ ಮಾಡಿದ್ದೇವೆ. ಇವತ್ತಿನಿಂದ ಇನ್ನೂ ಬಿಗಿಯಾದ ಕ್ರಮ ಕೈಗೊಳ್ಳುತ್ತೇವೆ. ಜನರು ಇದಕ್ಕೆ ಸಹಕರಿಸಬೇಕೆಂದು ವಿನಂತಿಸುತ್ತೇನೆ ಎಂದರು.

Also Read  ಪುತ್ತೂರು: ಓಮ್ನಿ ಕಾರು ಹಾಗೂ ಸ್ವಿಫ್ಟ್ ಕಾರು ನಡುವೆ ಢಿಕ್ಕಿ

error: Content is protected !!
Scroll to Top