ಸುಬ್ರಹ್ಮಣ್ಯ: ವಿಷ ಸೇವಿಸಿ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.21. ವಿಷ ಸೇವಿಸಿ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಬಾಳುಗೋಡು ಎಂಬಲ್ಲಿ ನಡೆದಿದೆ.

ಸುಳ್ಯ ತಾಲ್ಲೂಕು ಬಾಳುಗೋಡು ಉಪ್ಪುಕಳ ನಿವಾಸಿ ವಿನುತಾ(20) ಆತ್ಮಹತ್ಯೆ ಮಾಡಿಕೊಂಡ ಯುವತಿ. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮೂರನೇ ವರ್ಷದ ನರ್ಸಿಂಗ್ ತರಬೇತಿ ಪಡೆಯುತ್ತಿದ್ದ ವಿನುತಾ ಕೊರೋನಾ ವೈರಸ್ ಕಾಯಿಲೆ ಪ್ರಯುಕ್ತ ನರ್ಸಿಂಗ್ ತರಬೇತಿಗೆ ರಜೆ ನೀಡಿದ್ದ ಕಾರಣ ಮನೆಗೆ ಬಂದಿದ್ದಳು ಎನ್ನಲಾಗಿದೆ. ಸೋಮವಾರ ರಾತ್ರಿ ಎಂಟು ಗಂಟೆಯ ಸಮಯದಲ್ಲಿ ತನ್ನ ಮನೆಯಲ್ಲಿ ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿನುತಾಳನ್ನು ಮನೆಯವರು ಸುಳ್ಯದ ಕೆವಿಜಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದರು. ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ‌ ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top