ಖ್ಯಾತ ಸಾಮಾಜಿಕ ಕಾರ್ಯಕರ್ತ ಮಹೇಂದ್ರ ಕುಮಾರ್ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.25. ಬಜರಂಗದಳದ ಮಾಜಿ ರಾಜ್ಯ ಸಂಚಾಲಕ, ಸಾಮಾಜಿಕ ಕಾರ್ಯಕರ್ತ ಮಹೇಂದ್ರ ಕುಮಾರ್ ಕೊಪ್ಪ ಶನಿವಾರ ಬೆಳಗಿನ ಜಾವ ಹೃದಯಾಘಾತದಿಂದ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮೂಲತ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದವರಾಗಿದ್ದು, ಬೆಂಗಳೂರಿನಲ್ಲಿ ವಾಸವಾಗಿದ್ದ ಅವರಿಗೆ 47 ವರ್ಷ ವಯಸ್ಸಾಗಿತ್ತು. ಬಜರಂಗದಳದಲ್ಲಿ ಗುರುತಿಸಿಕೊಂಡು ರಾಜ್ಯ ಸಂಚಾಲಕ ಹುದ್ದೆಯವರೆಗೆ ಏರಿದ್ದ ಅವರು ಆ ಬಳಿಕದ ದಿನಗಳಲ್ಲಿ ಸಂಘ ಪರಿವಾರದ ವಿರುದ್ದ ಧ್ವನಿಯೆತ್ತತೊಡಗಿದ್ದರು.

Also Read  ಎಳನೀರು ಕಳ್ಳತನ - ವಾಹನದ ನಂಬರ್ ಪ್ಲೇಟ್ ಗೆ ಮಸಿ ಬಳಿದು ಕೃತ್ಯವೆಸಗಿದ ಕಿಡಿಗೇಡಿಗಳು

error: Content is protected !!
Scroll to Top