ಕಡಬ ಬಿಜೆಪಿ ವತಿಯಿಂದ ಪತ್ರಕರ್ತರಿಗೆ ಆಹಾರ ಸಾಮಗ್ರಿ ವಿತರಣೆ ➤ ಡಿಸಿಸಿ ಬ್ಯಾಂಕ್ ನಿಂದಲೂ ಕಿಟ್ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಎ.28. ಸ್ಥಳೀಯ ಆಗುಹೋಗುಗಳನ್ನು ಸಮಾಜಕ್ಕೆ ತಿಳಿಸುವ ಪತ್ರಕರ್ತರಿಗೆ ಕೊರೋನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಮಹಾಶಕ್ತಿ ಕೇಂದ್ರ ಕಡಬ ಮತ್ತು ಸೇವಾ ಭಾರತಿಯ ವತಿಯಿಂದ ಆಹಾರ ಸಾಮಗ್ರಿಗಳನ್ನು ವಿತರಿಸಲಾಯಿತು.

ಕಡಬದ ಎಲ್ಲಾ ಮಾಧ್ಯಮ ಮಿತ್ರರಿಗೆ ಅಕ್ಕಿ, ದಿನಸಿ ಸಾಮಗ್ರಿಗಳನ್ನು ಕಡಬದ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಶ್ರೀ ಕೃಷ್ಣ ಶೆಟ್ಟಿ ಅವರು ವಿತರಿಸಿದರು. ಸುಳ್ಯ ವಿಧಾನಸಭಾ ಕ್ಷೇತ್ರದ ಕಾರ್ಯದರ್ಶಿಯಾದ
ಪ್ರಕಾಶ್ ಎನ್.ಕೆ., ಕಡಬ ಸಿ.ಎ. ಬ್ಯಾಂಕ್ ಅಧ್ಯಕ್ಷ ರಮೇಶ್ ಕಲ್ಪುರೆ, ಕಡಬ ಸಿ.ಎ. ಬ್ಯಾಂಕ್ ಮಾಜಿ ಅಧ್ಯಕ್ಷರಾದ ಸೀತಾರಾಮ ಗೌಡ ಪೊಸವಳಿಕೆ, ಕಡಬ ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಕೊಯಿಲ, ಕಾರ್ಯದರ್ಶಿ ನಾಗರಾಜ್ ಎನ್.ಕೆ ಹಾಗೂ ಸದಸ್ಯರು ಉಪಸ್ಥಿತರಿದ್ದರು. ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಬ್ಯಾಂಕ್ ವತಿಯಿಂದ ನೀಡಲಾದ ಆಹಾರ ಸಾಮಾಗ್ರಿಗಳ ಕಿಟ್ ನ್ನು ರಮೇಶ್ ಕಲ್ಪುರೆ ಪತ್ರಕರ್ತರಿಗೆ ವಿತರಿಸಿದರು.

error: Content is protected !!

Join the Group

Join WhatsApp Group