ಪತ್ನಿ ಸಾವನ್ನಪ್ಪಿದ್ದಾಳೆಂದು ಭಾವಿಸಿದ ಪತಿ ► ಪೊಲೀಸರಿಗೆ ಹೆದರಿ ಆತ್ಮಹತ್ಯೆ…!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.31.  ಪತ್ನಿಗೆ ಮಚ್ಚಿನಿಂದ ಹಲ್ಲೆ ಮಾಡಿದ ಪತಿ ಬಳಿಕ ಅತ್ಮಹತ್ಯೆಗೆ ಶರಣಾಗಿರೋ ಘಟನೆ ಬೆಂಗಳೂರಿನ ಕೋಗಿಲು ಗ್ರಾಮದ ಶ್ರೀನಿವಾಸ್ ನಗರದಲ್ಲಿ ನಡೆದಿದೆ.

ಯಲಹಂಕದಲ್ಲಿ ಪತ್ನಿಯೊಂದಿಗೆ ಜಗಳವಾಡಿದ್ದ ನಾಗರಾಜ್ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ಪತ್ನಿ ಸಾವನ್ನಪ್ಪಿದ್ದಾಳೆಂದು ಭಾವಿಸಿದ ಪತಿ ನಾಗರಾಜ್, ಪೊಲೀಸರಿಗೆ ಹೆದರಿ ಕೋಗಿಲು ಗ್ರಾಮದ ಶ್ರೀನಿವಾಸ್ ನಗರದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಹಲ್ಲೆ ಪ್ರಕರಣ ಕುರಿತು ಯಲಹಂಕ ಪೊಲೀಸ್ ಠಾಣೆಯಲ್ಲಿ ನಾಗರಾಜ್ ವಿರುದ್ದ 307ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಗಂಭೀರವಾಗಿ ಗಾಯಗೊಂಡಿ ಪತ್ನಿ ದೇವಿಕಾರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

error: Content is protected !!

Join the Group

Join WhatsApp Group