ಪತಿ ಮಾಡಿದ ಸಾಲಕ್ಕೆ ಬೇಸತ್ತ ಪತ್ನಿ ► ಇಬ್ಬರು ಮಕ್ಕಳನ್ನು ಕೊಂದು ನೇಣಿಗೆ ಶರಣು..!!!

(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ.01, ಸಾಲಬಾಧೆಗೆ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದ ಸುದ್ದಿ ಎಲ್ಲಾರಿಗೂ ಗೊತ್ತೇ ಇದೆ. ಆದರೆ ಗಂಡ ಮಾಡಿದ ಸಾಲಕ್ಕೆ ಪತ್ನಿ ತನ್ನ ಇಬ್ಬರು ಮಕ್ಕಳನ್ನು ಕೊಂದು, ತಾನೂ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಗುರುವಾರ ರಾತ್ರಿ ಹಲಸೂರಿನಲ್ಲಿ ನಡೆದಿದೆ.


ಬೆಂಗಳೂರಿನ ಹಲಸೂರಿನಲ್ಲಿ ವಾಸವಿದ್ದ ರೇಣುಕಾ (34) ಆತ್ಮಹತ್ಯೆಗೆ ಶರಣಾಗಿರುವ ಮಹಿಳೆ. ಮನೆಯಲ್ಲಿ ಗಂಡನಿಲ್ಲದ ಸಮಯದಲ್ಲಿ ಮಕ್ಕಳಾದ ನಿಶ್ಚಿತಾ(6) ಮತ್ತು ಪಾವನಿ(10 ತಿಂಗಳು)ಗೆ ನೇಣು ಬಿಗಿದು ಬಳಿಕ ರೇಣುಕಾ ಆತ್ಮಹತ್ಯೆಗೆ ಶರಣಾಗಿದ್ದಾರೆ.

ರೇಣುಕಾ ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಬ್‌ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು. ರೇಣುಕಾ ದಂಪತಿ ಎಂಟು ವರ್ಷದ ಹಿಂದೆ ಮದುವೆಯಾಗಿದ್ದರು. ಗಂಡ 35 ಲಕ್ಷಕ್ಕೂ ಹೆಚ್ಚು ಸಾಲ ಮಾಡಿಕೊಂಡಿದ್ದ. ಇದರಿಂದಾಗಿ ಮಕ್ಕಳಿಗಾಗಿ ಹಣ ಉಳಿಸಿಲ್ಲ ಎಂಬ ಕೊರಗಿನಿಂದ ರೇಣುಕಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಹಲಸೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!

Join the Group

Join WhatsApp Group