ಉಡುಪಿಯಲ್ಲಿ ರಘುಪತಿ ಭಟ್ ಅವರ ಉಚಿತ ಬಸ್ ➤ ಜಿಲ್ಲಾ ಪಂಚಾಯತ್ ಅಧ್ಯಕ್ಷರೇ ಕಂಡೆಕ್ಟರ್..!!!

(ನ್ಯೂಸ್ ಕಡಬ) newskadaba.com ಉಡುಪಿ, ಮೇ.28., ಲಾಕ್ ಡೌನ್ ಹಿನ್ನಲೆಯಿಂದ ಬಸ್ಸುಗಳಿಲ್ಲದೆ ಸಮಸ್ಯೆ ಅನುಭವಿಸುತ್ತಿದ್ದ ಜನರಿಗೆ ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಡಿಯಾಳ ಇವರ ಸಹಕಾರದೊಂದಿಗೆ ಉಡುಪಿಯ ಶಾಸಕ ರಘುಪತಿ ಭಟ್ ಅವರು ಉಡುಪಿಯಲ್ಲಿ ಏಳು ರೂಟ್ ಗಳಲ್ಲಿ 12 ಉಚಿತ ಬಸ್ಸುಗಳ ವ್ಯವಸ್ಥೆ ಕಲ್ಪಿಸಿದ್ದಾರೆ. ಇದಕ್ಕೆ ಬಿಜೆಪಿ ಕಾರ್ಯಕರ್ತರು ಹಾಗೂ ಗಣೇಶೋತ್ಸವ ಸಮಿತಿಯ ಕಾರ್ಯಕರ್ತರೆ ಸ್ವಯಂ ಸೇವಕರಾಗಿ ಬಸ್ಸಿನಲ್ಲಿ ಸೇವೆ ನೀಡುತ್ತಿದ್ದಾರೆ.

ಉಡುಪಿ ನಗರದಲ್ಲಿ ಖಾಸಗಿ ಸಿಟಿ ಬಸ್ಸಿನಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ ಬಾಬು ಅವರು ಸ್ವತಃ ಕಂಡೆಕ್ಟರ್ ಆಗಿ ತನ್ನ ಉಚಿತ ಸೇವೆಯನ್ನು ನೀಡುತ್ತಿದ್ದಾರೆ. ಬಸ್ಸಿಗೆ ಬರುವ ಪ್ರಯಾಣಿಕರಿಗೆ ಸ್ಯಾನಿಟೈಜ್ ಮಾಡುವುದು ಸೇರಿದಂತೆ ಅವರ ಮಾಹಿತಿಗಳನ್ನು ಸಂಗ್ರಹಿಸುವ ಕೆಲಸವನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ ಬಾಬುರವರು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದು ಸಾರ್ವಜನಿಕರು ಅಧ್ಯಕ್ಷರ ಸರಳ ಜೀವನಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.

error: Content is protected !!
Scroll to Top