ಕಡಬ ಮಸೀದಿಯಲ್ಲಿ ನಮಾಜ್ ಮಾಡುತ್ತಲೇ ಕುಸಿದು ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಮೇ.28., ಮಸೀದಿಯಲ್ಲಿ ನಮಾಜ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಕಳಾರ ಎಂಬಲ್ಲಿ ನಡೆದಿದೆ.

 

ಮೃತ ದುರ್ದೈವಿಯನ್ನು ಕಳಾರ ನಿವಾಸಿ ಅಬ್ದುಲ್ ಖಾದರ್ ಎಂದು ಗುರುತಿಸಲಾಗಿದೆ.

ಪ್ರತಿನಿತ್ಯ ಅಝಾನ ಕೊಡಲೆಂದು ಮಸೀದಿಗೆ ಹೋಗುತ್ತಿದ್ದ ಅಬ್ದುಲ್ ಖಾದರ್ ಅವರು ಇಂದು ಕೂಡ ಮುಂಜಾನೆ 4 ಗಂಟೆ ಸುಮಾರಿಗೆ ಮಸೀದಿಗೆ ತೆರಳಿ ತಮ್ಮ ಪಾಡಿಗೆ ನಮಾಜ್ ಮಾಡುತ್ತಿದ್ದರು. ನಿಂತಿದ್ದ ಅಬ್ದುಲ್ ಖಾದರ್ ಕೂಡಲೇ ಕುಸಿದು ಬಿದ್ದಿದ್ದಾರೆ.

Also Read  ನೇರಳಕಟ್ಟೆ: ಚಲಿಸುತ್ತಿದ್ದ ಬಸ್ ಗೆ ಹಿಂದಿನಿಂದ ಕಾರು ಢಿಕ್ಕಿ ► ಇಬ್ಬರಿಗೆ ಗಾಯ

ಇದೇ ಸ್ಥಳದಲ್ಲೇ ಇದ್ದ ವ್ಯಕ್ತಿಯೊಬ್ಬರು ಎಬ್ಬಿಸಲು ಹೋದಾಗ ಖಾದರ್ ಅದಾಗಲೇ ಮೃತಪಟ್ಟಿದ್ದಾರೆ. ಈ ಎಲ್ಲಾ ದೃಶ್ಯಗಳು ಮಸೀದಿಯಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಘಟನಾ ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿನೀಡಿದ್ದಾರೆ.

error: Content is protected !!
Scroll to Top