ಕುಮಾರಧಾರ ನದಿಯಲ್ಲಿ ಮೃತದೇಹ ಪತ್ತೆ ➤ ಕಡಬ ಪೊಲೀಸರಿಂದ ಪರಿಶೀಲನೆ

(ನ್ಯೂಸ್ ಕಡಬ) newskadaba.com ಕಡಬ, ಮೇ.28. ಹತ್ತು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಮೃತದೇಹವೊಂದು ಕುಮಾರಧಾರ ನದಿ ತಟದಲ್ಲಿ ಕೊಳೆತ ಸ್ಥಿತಿಯಲ್ಲಿ ಗುರುವಾರದಂದು ಪತ್ತೆಯಾಗಿದೆ.

ಮೃತ ವ್ಯಕ್ತಿಯನ್ನು ಕಡಬ ತಾಲೂಕು ಕುಂತೂರು ನಿವಾಸಿ ರುಕ್ಮಯ್ಯ ಗೌಡ(50) ಎಂದು ಗುರುತಿಸಲಾಗಿದೆ. ಕಳೆದ ಹತ್ತು ದಿನಗಳ ಹಿಂದೆ ನಾಪತ್ತೆಯಾಗಿದ್ದ ಇವರನ್ನು ಎಲ್ಲಡೆ ಹುಡುಕಾಡಿ ಪತ್ತೆಯಾಗದ ಹಿನ್ನೆಲೆಯಲ್ಲಿ ಮಂಗಳವಾರದಂದು ಕಡಬ ಠಾಣೆಗೆ ದೂರು ನೀಡಲಾಗಿತ್ತು. ಗುರುವಾರ ಸಂಜೆ ಕೊಳೆತ ಸ್ಥಿತಿಯಲ್ಲಿ ಇವರ ಮೃತದೇಹವು ಕಡಬ ಠಾಣಾ ವ್ಯಾಪ್ತಿಯ ಚಾರ್ವಾಕ ಗ್ರಾಮದ ಓಟಕೆರೆ ಎಂಬಲ್ಲಿ ಕುಮಾರಧಾರಾ ನದಿಯ ತಟದಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಅನ್ಯಕೋಮಿನ ಯುವಕನೊಂದಿಗೆ ಬೈಕ್ ನಲ್ಲಿ ತೆರಳಿದ ಯುವತಿ; ತಿಂಗಳ ಬಳಿಕ ವಿಡಿಯೋ ವೈರಲ್- ದೂರು ದಾಖಲು

error: Content is protected !!
Scroll to Top