ವಳಕಡಮದಲ್ಲಿ ಅಕ್ರಮ ಮದ್ಯಮಾರಾಟ ► ಅಂಗಡಿ ಮಾಲಿಕನ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಡಬ,ಸೆ.02, ಠಾಣಾ ವ್ಯಾಪ್ತಿಯ ಪುತ್ತೂರು ತಾಲೂಕಿನ ಕೊೖಲ ಗ್ರಾಮದ ವಳಕಡಮ ಮೂರಾಜೆ ಎಂಬಲ್ಲಿ ಅಂಗಡಿಯೊಂದರಲ್ಲಿ ಅಕ್ರಮವಾಗಿ ಮಧ್ಯಪಾನಕ್ಕೆ ಅವಕಾಶ ಮಾಡಿಕೊಟ್ಟಿರುವ ಹಿನ್ನೆಯಲ್ಲಿ ಅಂಗಡಿ ಮಾಲಕರ ವಿರುದ್ಧ ಪ್ರಕರಣ ದಾಖಲಾಗಿದೆ.

ಕಡಬ ಎಸ್.ಐ ಪ್ರಕಾಶ್ ದೇವಾಡಿಗ ಹಾಗೂ ಸಿಬ್ಬಂದಿ ವರ್ಗ ವಳಕಡಮದಲ್ಲಿ ಅಕ್ರಮ ಮದ್ಯಮಾರಾಟವಾಗುತ್ತಿದೆ ಎನ್ನುವ ಖಚಿತ ಮಾಹಿತಿ ಆಧಾರದಲ್ಲಿ ಮೇಲೆ ಧಾಳಿ ನಡೆಸಲು ಹೋದ ಸಂದರ್ಭದಲ್ಲಿ ಊರಾಜೆ ಗಣೇಶ ಎಂಬವರ ಅಂಗಡಿಯಲ್ಲಿ ವ್ಯಕ್ತಿಯೊಬ್ಬರು ಮದ್ಯಪಾನ ಮಾಡುತ್ತಿರುವುದು ಕಂಡು ಬಂದಿದೆ. ಪೋಲೀಸರು ದಾಳಿ ನಡೆಸುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ ಎಂದು ತಿಳಿಸಿರುವ ಪೋಲೀಸರು ಮದ್ಯಪಾನ ಮಾಡಲು ಅವಕಾಶ ನೀಡಿದ ಆರೋಪದಲ್ಲಿ ಗಣೇಶ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾತ್ರವಲ್ಲ ಎರಡು ಬಾಟಲ್ ವಿಸ್ಕಿಯನ್ನು ವಶಪಡಿಸಿಕೊಂಡಿದ್ದಾರೆ.

error: Content is protected !!

Join the Group

Join WhatsApp Group