ಮಂಗಳೂರು: ಮಾರಕಾಸ್ತ್ರದಿಂದ ಹಲ್ಲೆ ➤ ಓರ್ವ ಸಾವು..!! ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂನ್ 01., ಮೂವರು ಯುವಕರ ಮೇಲೆ ದಾಳಿ ತಂಡವೊಂದು ದಾಳಿ ನಡೆಸಿದ ಪರಿಣಾಮ ಓರ್ವ ಸಾವನ್ನಪ್ಪಿ,ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಭಾನುವಾರ ರಾತ್ರಿ ಬಜಪೆ ಠಾಣಾ ವ್ಯಾಪ್ತಿಯ ಎಕ್ಕಾರು ದೇವರಗುಡ್ಡೆಯಲ್ಲಿ ನಡೆದಿದೆ

ಸಾವನ್ನಪ್ಪಿದ ಯುವಕನನ್ನು ಕೀರ್ತನ್ (20) ಹಾಗೂ ಗಾಯಗೊಂಡವರನ್ನು ನಿತಿನ್ (20) ಮತ್ತು ಮಣೇಶ್ (20) ಎಂದು ಗುರುತಿಸಲಾಗಿದೆ. ಗಾಂಜಾ ಮತ್ತು ಅಕ್ರಮ ಮರಳುಗಾರಿಕೆಯೇ ಈ ಘಟನೆಗೆ ಪ್ರಮುಖ ಕಾರಣ ಎನ್ನಲಾಗಿದೆ.

ಭಾನುವಾರ ರಾತ್ರಿ ಸುಮಾರು 9.30 ಗಂಟೆಗೆ ಎಕ್ಕಾರು ಪಂಚಾಯತ್ ವ್ಯಾಪ್ತಿಯ ದೇವರಗುಡ್ಡೆ ಸರ್ಕಲ್ ಬಳಿ ಕೀರ್ತನ್, ಮಣೇಶ್, ನಿತಿನ್ ಈ ಮೂವರು ನಿಂತಿದ್ದ ಸಂದರ್ಭ ಅಲ್ಲಿಗೆ ಬಂದ ಮೂವರ ತಂಡದ ಮಧ್ಯೆ ಮಾತಿನ ಚಕಮಕಿ ನಡೆದಿದು, ಕೀರ್ತನ್ ನಿತಿನ್ ಮತ್ತು ಮಣೇಶ್ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಪರಾರಿಯಾಗಿದೆ.

error: Content is protected !!

Join the Group

Join WhatsApp Group