ರಾಷ್ಟ್ರೀಯ ಖೋ ಖೋ ಆಟಗಾರ ನೀರಿನಲ್ಲಿ ಮುಳುಗಿ ಮೃತ್ಯು ➤ ಸಾವಿನ ಸುತ್ತ ಅನುಮಾನದ ಹುತ್ತ.! 

(ನ್ಯೂಸ್ ಕಡಬ) newskadaba.com  ಶಿವಮೊಗ್ಗ,ಜೂ.02: ರಾಷ್ಟ್ರೀಯ ಖೋಖೋ ಆಟಗಾರ ನೀರಿನಲ್ಲಿ ಮುಳುಗಿ ಸಾವಿಗೀಡಾದ ಘಟನೆ ಸಮೀಪದ ಮಂಡಗದ್ದೆ ಗ್ರಾಮದ ಬಳಿ ನಡೆದಿದೆ ಮೃತನನ್ನು ಅರುಣ್(27) ಎಂದು ಹೇಳಲಾಗಿದೆ. ಅರುಣ್ ರಾಷ್ಟ್ರೀಯ ಖೋ ಖೋ ತಂಡ ಪ್ರತಿನಿಧಿಸಿದ್ದರು. ಸದ್ಯ ಶಿವಮೊಗ್ಗದ ಕೆಎಸ್ಆರ್ಟಿಸಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಶುಕ್ರವಾರ ಮನೆಯಿಂದ ಹೊರಗೆ ತೆರಳಿದ್ದ ಅವರು ಪುನಃ ವಾಪಸ್ಸು ಮನೆಗೆ ಬಂದಿರಲಿಲ್ಲ. ಶನಿವಾರ ಮಂಡಗದ್ದೆ ಕಾಡಿನ ಬಳಿ ಅವರ ಮೋಟಾರ್ ಬೈಕ್ ಸಿಕ್ಕರೆ, ಪಕ್ಕದಲ್ಲಿಯೇ ಹರಿಯುವ ತುಂಗಾ ನದಿಯ ದಂಡೆಯಲ್ಲಿದ್ದ ಹರಿಗೋಲಿನಲ್ಲಿ ಷರಟು, ಪರ್ಸ್, ಐಡಿ ಕಾರ್ಡ್ ಇತ್ಯಾದಿ ಸಿಕ್ಕಿದೆ. ಬಳಿಕ ಇವರಿಗಾಗಿ ಹುಡುಕಾಟ ನಡೆದಿತ್ತು.

Also Read  ಅನುಮಾನಾಸ್ಪದವಾಗಿ ವ್ಯಕ್ಕಿ ಸಾವು

 

 

ಸೋಮವಾರ ಅರುಣ್ ಶವ ನದಿಯಲ್ಲಿ ಪತ್ತೆಯಾಗಿದೆ. ಈ ಸಾವಿನ ಹಿಂದೆ ಹಲವಾರು ಶಂಕೆ ವ್ಯಕ್ತವಾಗಿದ್ದು, ಅವರ ಕುಟುಂಬದವರು ಇದು ಸಹಜ ಸಾವಲ್ಲ, ಕೊಲೆ ಎನ್ನುತ್ತಿದ್ದಾರೆ.ಕೆಲ ವರ್ಷದ ಹಿಂದೆ ಅರುಣ್ ತಂದೆ ಚಿತ್ರದುರ್ಗದಲ್ಲಿ ಕೆಎಸ್ಆರ್ಟಿಸಿ ಬಸ್ಸುಗಳ ನಡುವೆ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದರು.ಆ ನಂತರ ಇವರಿಗೆ ತಂದೆಯ ಕೆಲಸ ಸಿಕ್ಕಿತ್ತು. ಇತ್ತೀಚೆಗೆ ಅರುಣ್ ಇಷ್ಟಪಟ್ಟ ಯುವತಿಯೊಂದಿಗೆ ಮದುವೆ ನಿಶ್ಚಿತಾರ್ಥವಾಗಿತ್ತು. ಒಟ್ಟಾರೆ ಅರುಣ್ ಯಾವುದೇ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಳ್ಳುವ ಮನಃಸ್ಥಿತಿಯಾಗಲೀ, ಅಂತಹ ರಿಸ್ಥಿತಿಯಾಗಲೀ ಇರಲಿಲ್ಲ ಎನ್ನುತ್ತಾರೆ ಕುಟುಂಬ ವರ್ಗದವರು…ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಪುತ್ತೂರು: ಅತ್ಯುತ್ತಮ ದಿಗ್ವಿಜಯ ವರದಿಗಾರ ಅಶೋಕ್‍ಗೆ ರಾಷ್ಟ್ರೀಯ ಟೆಲಿವಿಷನ್ ಅವಾರ್ಡ್

 

 

 

 

 

error: Content is protected !!
Scroll to Top