BREAKING NEWS ರಾಜ್ಯದಲ್ಲಿ ಕೊರೋನ ಸೋಂಕಿಗೆ ಮತ್ತೆ ನಾಲ್ವರು ಬಲಿ: 257 ಮಂದಿಗೆ ಸೋಂಕು ದೃಢ

ಬೆಂಗಳೂರು, ಜೂ.4: ರಾಜ್ಯದಲ್ಲಿ ಇಂದು ಕೊರೋನದಿಂದ ನಾಲ್ವರು ಸಾವನ್ನಪ್ಪಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 257 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ ಒಟ್ಟು 4,320ಕ್ಕೆ ಏರಿಕೆಯಾಗಿದೆ.

ಗುರುವಾರ ಒಂದೇ ದಿನ ಉಡುಪಿ ಜಿಲ್ಲೆಯೊಂದರಲ್ಲೇ 92 ಪ್ರಕರಣಗಳು ವರದಿಯಾಗಿದ್ದರೆ ರಾಯಚೂರಿನಲ್ಲಿ 88 ಕೋವಿಡ್ ಸೋಂಕಿನ ಪ್ರಕರಣಗಳು ವರದಿಯಾಗಿವೆ.

ಈ ಮೂಲಕ ರಾಜ್ಯದಲ್ಲಿ ಒಟ್ಟು 2,651 ಸಕ್ರಿಯ ಕೋವಿಡ್ ಸೋಂಕಿನ ಪ್ರಕರಣಗಳು ಇವೆ. ಹಾಗೂ ಕಳೆದ 24 ಗಂಟೆಗಳ ಅವಧಿಯಲ್ಲಿ ಕರ್ನಾಟಕದಲ್ಲಿ 4 ಜನರು ಕೋವಿಡ್ ನಿಂದಾಗಿ ಮೃತಪಟ್ಟಿದ್ದಾರೆ ಮತ್ತು ಈ ಮೂಲಕ ನಮ್ಮಲ್ಲಿ ಇಲ್ಲಿಯವರೆಗೆ ಕೋವಿಡ್ ಸೋಂಕಿಗೆ ಬಲಿಯಾದವರ ಒಟ್ಟು ಸಂಖ್ಯೆ 57ಕ್ಕೇರಿದಂತಾಗಿದೆ.

Also Read  ಬೈಕ್’ನಲ್ಲಿ 6.5 ಕೆ.ಜಿ ಚಿನ್ನ ಸಾಗಿಸುತ್ತಿದ್ದಾಗ ಸಿಕ್ಕಿ ಬಿದ್ದ ವ್ಯಕ್ತಿ..!

ಇನ್ನು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು 13 ಜನ ಕೋವಿಡ್ ಸೋಂಕಿತರು ತೀವ್ರ ನಿಗಾ ಘಟಕಗಳಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

error: Content is protected !!
Scroll to Top