ಪುತ್ತೂರು: ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಹೃದಯಾಘಾತದಿಂದ ನಿಧನ

(ನ್ಯೂಸ್ ಕಡಬ)newskadaba.com ಪುತ್ತೂರು. ಜೂ. 5, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಮಾಣಿಕ್ಯ ರಾಜ್ ಪಡಿವಾಳ್(68 ವ) ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯ ಸದಸ್ಯ, ಎಪಿಎಂಸಿ ಮಾಜಿ ನಿರ್ದೇಶಕ, ಬಜತ್ತೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಮಾಜಿ ಅಧ್ಯಕ್ಷರಾಗಿಯೂ ಹಲವಾರು ಕ್ಷೇತ್ರಗಳಲ್ಲಿ ಸೇವೆಗೈದಿದ್ದರು.

ಮೃತರು ಪತ್ನಿ, ಪುತ್ರ ಹಾಗೂ ಇಬ್ಬರು ಸಹೋದರರು ಮತ್ತು ಓರ್ವ ಸಹೋದರಿಯರನ್ನು ಅಗಲಿದ್ದಾರೆ. ಶಕುಂತಲಾ ಶೆಟ್ಟಿ, ಪ್ರಸಾದ್ ಕೌಶಲ್ ಶೆಟ್ಟಿ, ಚಂದ್ರಹಾಸ ಶೆಟ್ಟಿ ಸೇರಿದಂತೆ ಹಲವಾರು ಮಂದಿ ಮೃತರ ಮನೆಗೆ ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.

error: Content is protected !!

Join the Group

Join WhatsApp Group