ಕಡಬದಲ್ಲಿ ಪೇಟೆಯಲ್ಲಿ ಲೋಕಾಯ್ತುಕ ರೈಡ್ ➤ ಮಾಸ್ಕ್ ಹಾಕದವರಿಗೆ ಭರ್ಜರಿ ಕ್ಲಾಸ್

(ನ್ಯೂಸ್ ಕಡಬ) newskadaba.com ಕಡಬ ಜೂ.10:  ಕಡಬ ಪೇಟೆಯಲ್ಲಿ ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ಅಳವಡಿಸಿಕೊಳ್ಳದ ಸಾರ್ವಜನಿಕರಿಗೆ ಮಂಗಳೂರು ಲೋಕಾಯುಕ್ತ ಡಿವೈಎಸ್ಪಿ ವಿಜಯ ಪ್ರಸಾದ್ ಚೆನ್ನಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ.

 


ಮಂಗಳವಾರದಂದು ಕಡಬ ಪೇಟೆಯಲ್ಲಿ ಅಧಿಕಾರಿಗಳ ಜತೆ ರೌಂಡ್ಸ್ ಮಾಡಿದ ಲೋಕಾಯುಕ್ತ ಡಿವೈಎಸ್ಪಿ, ಅಂಗಡಿ, ಹೋಟೆಲ್, ಬ್ಯಾಂಕ್, ಕಛೇರಿಗಳಿಗೆ ಭೇಟಿ ನೀಡಿ ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೆ, ಅಂತರ ಕಾಯ್ದುಕೊಳ್ಳದೆ ಇರುವವರಿಗೆ ಕ್ಲಾಸ್ ತೆಗೆದುಕೊಂಡರು. ಈ ಸಂದರ್ಭದಲ್ಲಿ ಲೋಕಾಯುಕ್ತ ಹೆಡ್ ಕಾನ್ಸ್‌ಟೇಬಲ್ ವೇಣುಗೋಪಾಲ್, ಕಂದಾಯ ನಿರೀಕ್ಷಕ ಅವಿನ್ ರಂಗತ್ ಮಲೆ, ಪಂಚಾಯತ್ ಸಿಬ್ಬಂದಿಗಳು ಜತೆಗಿದ್ದರು.

 

Also Read  ಇಂದಿನಿಂದ ದ್ವಿತೀಯ ಪರೀಕ್ಷೆ ➤ ಕಟ್ಟುನಿಟ್ಟಿನ ಕಣ್ಗಾವಲು

error: Content is protected !!
Scroll to Top