ಕೇರಳ ಮಾಜಿ ರಣಜಿ ಕ್ರಿಕೆಟಿಗ ಸಾವು ➤ ಮಗ ಅಶ್ವಿನ್ ಬಂಧನ..!

(ನ್ಯೂಸ್ ಕಡಬ) newskadaba.com ತಿರುವನಂತಪುರಂ,ಜೂ.10: ಕೇರಳ ರಣಜಿ ಟ್ರೋಫಿಯ ಮಾಜಿ ಕ್ರಿಕೆಟಿಗ ಕೆ. ಜಯಮೋಹನ್ ಥಂಪಿ(64) ಇಲ್ಲಿನ ಮನಕ್ಕಾಡುವಿನಲ್ಲಿರುವ ತಮ್ಮ ನಿವಾಸದಲ್ಲಿ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ. ತಂದೆಯನ್ನು ಹತ್ಯೆ ಮಾಡಿದ ಶಂಕೆಯಡಿ ಮಗ ಅಶ್ವಿನ್ ಥಂಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಕೆ. ಜಯಮೋಹನ್ 1982ರಿಂದ 84ರ ಅವಧಿಯಲ್ಲಿ ಕೇರಳ ಪರ 6 ರಣಜಿ ಪಂದ್ಯಗಳನ್ನು ಆಡಿದ್ದು,114 ರನ್ ಬಾರಿಸಿದ್ದರು.

ಕೇರಳ ತಂಡದಲ್ಲಿ ಜಯಮೋಹನ್ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಆಗಿ ಗುರುತಿಸಿಕೊಂಡಿದ್ದರು.ಇದಾದ ಬಳಿಕ ಸ್ಟೇಟ್ ಬ್ಯಾಂಕ್ ಆಫ್ ತ್ರಾವಂಕೂರುವಿನಲ್ಲಿ ಡೆಪ್ಯೂಟಿ ಜನರಲ್ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿದ್ದರು, ಜೊತೆಗೆ 15 ವರ್ಷಗಳ ಕಾಲ ಈ ಸಂಸ್ಥೆಯ ಪರ ಕ್ರಿಕೆಟ್ ಆಡಿದ್ದರು.ಜಯಮೋಹನ್ ಮೃತದೇಹ ಅವರ ನಿವಾಸದಲ್ಲಿ ಪತ್ತೆಯಾಗಿತ್ತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

 

 

error: Content is protected !!

Join the Group

Join WhatsApp Group