?? Breaking News ದ.ಕ. ಜಿಲ್ಲೆಯಲ್ಲಿಂದು ಕೊರೋನಾ ‘ಆರ್ಭಟ’..!! ➤ ಸೌದಿಯಿಂದ ಬಂದ 30 ಮಂದಿಯಲ್ಲಿ ಸೋಂಕು…!?

(ನ್ಯೂಸ್ ಕಡಬ)newskadaba.com ಮಂಗಳೂರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏಕಾಏಕಿ ಏರಿಕೆಯಾಗಿದ್ದು ಬರೋಬ್ಬರಿ 30ಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ.

ಕೆಲವು ದಿನಗಳ ಹಿಂದೆ ಸೌದಿಯಿಂದ ತಾಯ್ನಾಡಿಗೆ ಮರಳಿರುವವರು ಕ್ವಾರಂಟೈನ್ ನಲ್ಲಿದ್ದು ಅವರಲ್ಲಿ 30 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಹೇಳಲಾಗುತ್ತಿದೆ. ಸೋಂಕಿತರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ವಿದೇಶದಿಂದ ಬಂದವರು ಮತ್ತು ಮಹಾರಾಷ್ಟ್ರ ಮೂಲದಿಂದ ಸೋಂಕು ಹರಡುತ್ತಿದ್ದು ಜಿಲ್ಲೆಯ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.

error: Content is protected !!

Join the Group

Join WhatsApp Group